ಉಡುಪಿ: ಕಳೆದ ವರ್ಷ ಪಠ್ಯಪುಸ್ತಕಗಳ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನಾಗಿ ನೇಮಕಗೊಂಡು ಭಾರೀ ವಿವಾದಕ್ಕೆ ಕಾರಣರಾದ ರೋಹಿತ್ ಚಕ್ರತೀರ್ಥ ಅವರನ್ನು ಇದೀಗ ಉಡುಪಿಯಲ್ಲಿ ಫೆ.11 ಹಾಗೂ 12ರಂದು ನಡೆಯುತ್ತಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ಅಸಮಾಧಾನ ವ್ಯಕ್ತವಾಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟನೆ ಹೊರಡಿಸಿರುವ ರಂಗಕರ್ಮಿ ಉದ್ಯಾವರ ನಾಗೇಶ ಕುಮಾರ್, ಕುಂಬ್ಳೆ ಸದಾಶಿವ ಮಾಸ್ತರ್, ಶ್ರೀನಿವಾಸ ಕಾರ್ಕಳ, ಹಾಗೂ ಹಿರಿಯ ಸಾಹಿತಿ ಪುರುಷೋತ್ತಮ ಬಿಳಿಮಲೆ, ಸಂಘಟಕರು ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.
”ಕರಾವಳಿಯ ಯಕ್ಷಗಾನವು ಇವತ್ತು ವಿಶ್ವ ಪ್ರಸಿದ್ಧ ಕಲೆಯಾಗಿ ಬೆಳೆದಿದೆ. ಕಳೆದ ಆರು ಶತಮಾನಗಳಿಂದ ಈ ಕಲೆಯು ಬೆಳೆದು ಬಂದ ರೀತಿಯು ಅಚ್ಚರಿ ಹುಟ್ಟಿಸುತ್ತದೆ. ಆ ಕಲೆಯನ್ನು ಅತ್ಯದ್ಭುತವಾಗಿ ಸಂಘಟಿಸುವ ಮಹನೀಯರಿದ್ದಾರೆ, ಯಕ್ಷಗಾನ ಪ್ರಸಂಗಗಳನ್ನು ಬರೆದು ಪ್ರಸಿದ್ಧರಾದವರಿದ್ದಾರೆ. ಯಕ್ಷಗಾನ ಕಲಾವಿದರು ಪುರಾಣ, ಇತಿಹಾಸ ಮತ್ತು ವರ್ತಮಾನಗಳನ್ನು ಬೆಸೆದು ರಂಗಭೂಮಿಯ ಮೇಲೆ ವಿಸ್ಮಯಗಳನ್ನೇ ಸೃಷ್ಟಿಸಿದ್ದಾರೆ. ಯಕ್ಷಗಾನ ವಿಮರ್ಶೆಯೂ ಸರ್ವಾಂಗೀಣವಾಗಿ ಬೆಳೆದಿದೆ. ಈ ಕಲೆಯಲ್ಲಿನ ಭಾಗವತರು, ಚಂಡೆ ವಾದಕರು, ಮದ್ದಲೆ ವಾದಕರು ತಮ್ಮದೇ ರೀತಿಯ ಶೈಲಿಗಳನ್ನೇ ನಿರ್ಮಿಸಿ ಕರ್ನಾಟಕ ಸಂಸ್ಕೃತಿಯ ಘನತೆಯನ್ನು ವಿಸ್ತರಿಸಿದ್ದಾರೆ”.
”ಇಂಥ ಮಹಾನ್ ಕಲೆಯೊಂದರ ರಾಜ್ಯ ಸಮ್ಮೇಳನ ನಡೆಯುವುದು ಅತ್ಯಂತ ಅವಶ್ಯಕವಾಗಿತ್ತು ಮತ್ತು ಅದೀಗ ನಡೆಯುತ್ತಿದೆ. ಹಿರಿಯ ಕಲಾವಿದರಾದ ಪ್ರಭಾಕರ ಜೋಷಿಯವರು ಅದರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದು ಯಕ್ಷಗಾನ ಪ್ರಿಯರಿಗೆ ಸಂತೋಷ ಕೊಡುವ ವಿಷಯವೇ ಹೌದು”.
”ಆದರೆ, ಸಮ್ಮೇಳನದ ದಿಕ್ಷೂಚಿ ಭಾಷಣಕ್ಕೆ ಸಂಘಟಕ, ಕಲಾವಿದ, ಪ್ರಸಂಗ ಕರ್ತ ಅಥವಾ ವಿಮರ್ಶಕನೂ ಅಲ್ಲದ ರೋಹಿತ್ ಚಕ್ರತೀರ್ಥರನ್ನು ಆರಿಸಲಾಗಿದೆ. ಯಕ್ಷಗಾನ ಲೋಕದಲ್ಲಿ ಚಕ್ರತೀರ್ಥರಿಗಿಂತ ಬಹಳ ಸಾಧನೆ ಮಾಡಿರುವ ಡಾ. ವಿವೇಕ ರೈ, ಡಾ. ಚಿನ್ನಪ್ಪ ಗೌಡ, ಡಾ. ಚಂದ್ರಶೇಖರ ದಾಮ್ಲೆ, ಡಾ. ರಾಘವ ನಂಬಿಯಾರ್, ಡಾ. ಪಾದೆಕಲ್ಲು ವಿಷ್ಣು ಭಟ್, ಡಾ. ವಸಂತ ಭಾರದ್ವಾಜ್. ಡಾ. ನಾಗವೇಣಿ ಮಂಚಿ, ರಾಧಾಕೃಷ್ಣ ಕಲ್ಚಾರ್, ಕಲಾವಿದ ಜಬ್ಬಾರ್ ಸಮೋ, ಡಾ. ಪ್ರಥ್ವಿರಾಜ ಕವತ್ತಾರ್, ಡಾ. ಆನಂದ ರಾಮ ಉಪಾಧ್ಯ, ಡಾ. ಜಿ ಎಸ್ ಭಟ್, ಗೋಪಾಲಕೃಷ್ಣ ಭಾಗವತ, ಕೆರೆಮನೆ ಶಿವಾನಂದ ಹೆಗಡೆ, ವಿದ್ವಾನ್ ರಂಗಾ ಭಟ್ಟ ಮೊದಲಾದ ಅಸಂಖ್ಯ ಮಹನೀಯರಿದ್ದಾರೆ.”
”ಈ ಮಹನೀಯರು ಯಕ್ಷಗಾನದ ಯಾವುದೇ ಕ್ಷೇತ್ರದ ಮೇಲೆ ಅಧಿಕೃತವಾಗಿ ಮಾತಾಡಬಲ್ಲ ಧೀಮಂತರು. ಇಂಥವರನ್ನು ಬದಿಗೊತ್ತಿ, ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರಂಥವರನ್ನು ಕರೆದಿರುವುದು ಆ ಕಲೆಗೆ ಮಾಡಿದ ಬಹುದೊಡ್ಡ ಅವಮಾನ ಎಂದು ನಾವು ಭಾವಿಸುತ್ತೇವೆ. ಸಂಘಟಕರು ಈ ಕಡೆ ಗಮನ ಹರಿಸಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…