ಉಡುಪಿ : ಎರಡು ಸಾವಿರ ಕೋ. ರೂ. ಅಧಿಕ ಅನುದಾನ ತರಿಸಿ ಅಭಿವೃದ್ಧಿ ಕಾರ್ಯ ಕೈಗೊಂಡು ಉಡುಪಿ ವಿಧಾನಸಭಾ ಕೇÒತ್ರವನ್ನು ಕರ್ನಾಟಕದ ನಂ. 1 ಕ್ಷೇತ್ರವನ್ನಾಗಿ ಮಾಡಲಾಗಿದೆ. ಮುಂದಿನ 5 ವರ್ಷ ಅವಕಾಶ ನೀಡಿದರೆ ಭಾರತ ದೇಶದಲ್ಲೆ ಉಡುಪಿಯನ್ನು ಮಾದರಿ ಕ್ಷೇತ್ರವಾಗಿ ಮಾಡುವ ಆಸೆ ಇದೆ. ನನ್ನ ಈ ಆಸೆ ಈಡೇರಿಸಲು ತಾವು ಆಶೀರ್ವಾದ ಮಾಡಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಕಡೆಕಾರಿನಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮಾಂತರ ಮತ್ತು ನಗರ ಪ್ರದೇಶಕ್ಕೆ ಒಟ್ಟು 55 ಸರಕಾರಿ ಬಸ್ಗಳನ್ನು ತರಿಸಿದ್ದೇನೆ. ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಜನತೆಗೆ ಅನುಕೂಲವಾಗಬೇಕು ಎಂಬ ದೃಷ್ಟಿಯಿಂದ ಖಾಸಗಿ ಬಸ್ ಮಾಲಕರ ವಿರೋಧದ ನಡುವೆಯೂ ಸರಕಾರಿ ಬಸ್ಸನ್ನು ತರಿಸುವ ವ್ಯವಸ್ಥೆ ಮಾಡಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರಾದ ಅಮೃತ್ ಶೆಣೈ, ಮೀನಾಕ್ಷಿ ಮಾಧವ, ಯುವರಾಜ್, ಗಣೇಶ್ ನೆರ್ಗಿ, ದಿವಾಕರ ಕುಂದರ್, ಜನಾರ್ದನ ಭಂಡರ್ಕಾರ್, ನವೀನ್ ಕನ್ನರ್ಪಾಡಿ, ಸತೀಶ್ ಅಮೀನ್ ಪಡುಕರೆ, ತಾರಾನಾಥ್ ಸುವರ್ಣ ಉಪಸ್ಥಿತರಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]