ಉಡುಪಿ : ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ, ಅಗಲಿದ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನ ಆನೆಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ನಗರದ ಮಾರುತಿ ವೀಥಿಕಾದಲ್ಲಿ ಮಂಗಳವಾರ ನಡೆಯಿತು. ಮೌನ ಪ್ರಾರ್ಥನೆ ಸಲ್ಲಿಸಿದ ಬಳಿಕ ಅರಣ್ಯಅಧಿಕಾರಿಗಳು, ನಾಗರಿಕ ಸಮಿತಿಯ ಕಾರ್ಯಕರ್ತರು, ಪ್ರಾಣಿಪ್ರೀಯರು, ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ, ಉಪ ವಲಯ ಅರಣ್ಯಾಧಿಕಾರಿಗಳಾದ ಗುರುರಾಜ್, ಜೀವನದಾಸ್, ಗಸ್ತು ಅರಣ್ಯ ಪಾಲಕರಾದ ಕೇಶವ ಪೂಜಾರಿ, ಚರಣ್ ರಾಜ್, ಮಂಜುನಾಥ್, ಅಭಿಲಾಶ್, ಅರಣ್ಯ ಸಿಬ್ಬಂದಿ ಜೋಯ್, ಹಾಗೂ ಜೋಸ್ ಆಲೂಕಾಸ್ ಆಭರಣ ಮಳಿಗೆಯ ವ್ಯವಸ್ಥಾಪಕ ರಾಜೇಶ್ ಎನ್ ಆರ್, ಪ್ರಾಣಿ ದಯಾ ಸಂಘದ ಮಂಜುಳಾ, ಸಾಮಾಜಿಕ ಕಾರ್ಯಕರ್ತ ತಾರಾನಾಥ ಮೇಸ್ತ ಶಿರೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ವಿಶ್ವಪ್ರಸಿದ್ಧ ಮೈಸೂರು ದಸರೆಯಲ್ಲಿ ಎಂಟು ಬಾರಿ ಅಂಬಾರಿ ಹೊತ್ತಿದ್ದ ಗಜರಾಜ ಅರ್ಜುನ ಆನೆಯು ಸಕಲೇಶಪುರದ ಯಸಳೂರಿನಲ್ಲಿ ಕಾಡನೆಯನ್ನು ಸೆರೆ ಹಿಡಿಯುವ ಕಾರ್ಯಚರಣೆಯಲ್ಲಿ ಗಾಯಗೊಂಡು, ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟಿರುವ ಘಟನೆ ನಡೆದಿತ್ತು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…