ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಕಾಲೇಜು ವಾರ್ಡನ್ – Vishwanews24
ಉಡುಪಿಯಲ್ಲಿ ಅಮಾನವೀಯ ಘಟನೆ ; ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್
ಉಡುಪಿ: ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ಕೋಪಿಸಿಕೊಂಡು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಂಟಕಲ್ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.
ರಾಜೇಶ್ ವಿಕೃತಿ ಮೆರೆದ ವಾರ್ಡನ್.

ವಿದ್ಯಾರ್ಥಿನಿಯೊಬ್ಬಳು ನಿತ್ಯ ನಾಯಿ ಜೊತೆ ಆಟವಾಡುತ್ತಿದ್ದಳು. ಇದರಿಂದ ಕೋಪಿಸಿಕೊಂಡ ವಾರ್ಡನ್, ನಾಯಿಯನ್ನು ಹೊಡೆದು ಸಾಯಿಸಿದ್ದಾನೆ ಎನ್ನಲಾಗಿದೆ.
ಅದಾನಿ ಸಮೂಹ ಷೇರು ಮೌಲ್ಯಗಳಲ್ಲಿ ಭಾರೀ ಕುಸಿತ ; ಎಲ್ಐಸಿಗೆ ಎರಡೇ ದಿನದಲ್ಲಿ 18,000 ಕೋಟಿ ನಷ್ಟ – Vishwanews24
ನಾಯಿಗೆ ಮನಬಂದಂತೆ ಥಳಿಸಿ ಸಾಯಿಸಿರುವ ವೀಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ವಾರ್ಡನ್ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಘಟನೆ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
