Featured

ಉಡುಪಿಯಲ್ಲಿ ಆರಂಭವಾದ ಹಿಜಾಬ್ ಪ್ರಕರಣ ಕೂಡ PFI ನಿಷೇಧಕ್ಕೆ ಒಂದು ಕಾರಣ : ಶಾಸಕ ರಘುಪತಿ ಭಟ್ – Vishwanews24

ಉಡುಪಿಯಲ್ಲಿ ಆರಂಭವಾದ ಹಿಜಾಬ್ ಪ್ರಕರಣ ಕೂಡ PFI ನಿಷೇಧಕ್ಕೆ ಒಂದು ಕಾರಣ : ಶಾಸಕ ರಘುಪತಿ ಭಟ್

ಉಡುಪಿ : ಪಿಎಫ್ ಐ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಉಡುಪಿ ಶಾಸಕ ರಘುಪತಿ ಭಟ್, ” ಈ ಕೆಲಸ ಯಾವತ್ತೋ ಆಗಬೇಕಿತ್ತು. ಎಲ್ಲಾ ರಾಜ್ಯಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿದ ನಂತರ ಬ್ಯಾನ್ ಮಾಡಿದ್ದಾರೆ.

ಸಂಪೂರ್ಣ ಸಾಕ್ಷಾಧಾರಗಳೊಂದಿಗೆ ಬ್ಯಾನ್ ಮಾಡಿದ್ದಾರೆ. ವಿದೇಶಿ ಉಗ್ರಸಂಘಟನೆಗಳ ಜೊತೆ ಪಿಎಫ್ ಕೈಜೋಡಿಸಿದೆ. ಇದು ಸಾಬೀತಾದ ನಂತರ ಬ್ಯಾನ್ ಮಾಡಲಾಗಿದೆ. ಸಮಾಜ ಒಡೆಯುವ ಕೆಲಸದಲ್ಲಿ ಸಂಘಟನೆ ನಿರತವಾಗಿತ್ತು” ಎಂದು ಮಾದ್ಯಮಕ್ಕೆ ಪಿಎಫ್ಐ  ನಿಷೇದದ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಉಡುಪಿಯಲ್ಲಿ ಆರಂಭವಾದ ಹಿಜಾಬ್ ಪ್ರಕರಣ ಕೂಡ ಪಿ ಎಫ್ ನಿಷೇಧಕ್ಕೆ ಒಂದು ಕಾರಣ. ನಾವು ಕೂಡ ಸಾಕಷ್ಟು ಮಾಹಿತಿಗಳನ್ನ ಗುಪ್ತಚರ ಇಲಾಖೆಗೆ ನೀಡಿದ್ದೆವು. ಹಿಜಾಬ್ ಗಲಾಟೆಯ ಒಂದು ಭಾಗವಾಗಿದ್ದ ಪಿಎಫ್ ಐ ಪಾತ್ರ ಇರುವುದರ ಈಗ ಸಾಬೀತಾಗಿದೆ.

ಸಿಎಫ್ಐ ಗೆ ಸೇರ್ಪಡೆಕೊಂಡ ನಂತರ‌ ಟ್ವಿಟರ್ ಅಕೌಂಟ್ ಓಪನ್ ಮಾಡಿದ್ದರು. ವಿದ್ಯಾರ್ಥಿನಿಯರ ವರ್ತನೆ ಬದಲಾಗಿತ್ತು. ಅವರು ಟ್ವಿಟರ್ ಮೂಲಕ ದೇಶ ವಿರೋಧಿ ಹೇಳಿಕೆಗಳನ್ನು ಹಾಕುತ್ತಿದ್ದರು.ಸಿಎಫ್ಐ ನೇರವಾಗಿ ಪಾತ್ರ ವಹಿಸಿತ್ತು ಎಂದು ಆಗಲೇ ನಂಬಿದ್ದೆ. ಸಿಎಫ್ಐ ಇರದಿದ್ದರೆ ಹಿಜಾಬ್ ವಿವಾದ ಆಗುತ್ತಿರಲಿಲ್ಲ. ಗುಪ್ತ ಸ್ಥಳದಲ್ಲಿ ಉಡುಪಿಯ ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗಿತ್ತು.

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ : ಮಯೂರ್‌ ಜಯಕುಮಾರ್‌ – Vishwanews24

ಧರ್ಮದ ಅಂದ ಶ್ರದ್ದೆ ಬೆಳೆಸಲು ತರಬೇತಿ ನೀಡಲಾಗಿತ್ತು. ಈ ಬಗ್ಗೆ ನಾನು ಈ ಮೊದಲೇ ಆರೋಪಿಸಿದ್ದೆ. ಈಗ ಎಲ್ಲವೂ ನಿಜವಾದಾಗಿದೆ ಎಂದು ಶಾಸಕ‌ ಭಟ್ ಹೇಳಿದ್ದಾರೆ.

ಇನ್ನು, ಪಿಎಫ್ಐ ವಿರುದ್ಧದ ಕಾರ್ಯಾಚರಣೆ ಹಿಂದೆ ಆರ್ ಎಸ್ ಎಸ್ ಇದೆ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಪಿಎಫ್ ಐ ಬಗ್ಗೆ ಯಾರೂ ಹೇಳಬೇಕಾಗಿಲ್ಲ, ಸಮಾಜಕ್ಕೆ ಗೊತ್ತು.ಆರ್ ಎಸ್ ಎಸ್ ಹೇಳುವುದು ಬೇಡ ನೈಜ ಮುಸ್ಲಿಮರ ಬಳಿ ಬೇಕಾದರೆ ಕೇಳಿ. ನೈಜ ಮುಸ್ಲಿಮರು ಪಿಎಫ್ ಐ ಬ್ಯಾನ್ ಮಾಡಬೇಕು ಎಂದು ಹೇಳುತ್ತಾರೆ.

ಹಿಜಾಬ್ ವಿಚಾರ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಚರ್ಚೆಯಾಯಿತು, ಪಾಕಿಸ್ತಾನದಲ್ಲಿ ಅದು ಸುದ್ದಿ ಆಯಿತು. ಸಿ ಎಫ್ ಐ ಮಾಡಿದ ಹೋರಾಟ ಪಾಕಿಸ್ತಾನ ವಾಹಿನಿಗಳಲ್ಲಿ ಹೇಗೆ ಬಂತು?ವಿದೇಶದಿಂದ ಈ ರೀತಿಯ ಕೃತ್ಯಗಳಿಗೆ ಹಣ ಬಂದಿದೆ. ಸರಕಾರ ಈಗ ಪಿ ಎಫ್ ಐ ನಿಷೇಧಿಸಿದೆ. ಅವರು ಇನ್ನೊಂದು ಹೆಸರು ಇಟ್ಟುಕೊಂಡು ಸಂಘಟನೆ ಮಾಡುತ್ತಾರೆ. ಪಿ ಎಫ್ ಐ ಸಂಘಟನೆಯಲ್ಲಿ ನಂಟು ಇರುವವರನ್ನು ಪ್ರಜ್ಞಾವಂತ ಮುಸ್ಲಿಂ ಸಮುದಾಯದಿಂದ ಹೊರಹಾಕಿ. ಅವರನ್ನು ಸಮಾಜಘಾತಕ ಶಕ್ತಿಗಳಂತೆ ಪರಿಗಣಿಸಿ . ನಾವು ಮಾಡಿದರೆ ಆರ್ ಎಸ್ ಎಸ್ ಮಾಡಿದ್ದು ಎಂದು ಹೇಳುತ್ತಾರೆ. ಸಮುದಾಯವೇ ಅವರನ್ನು ಬಹಿಷ್ಕರಿಸಲಿ.ಮುಸ್ಲಿಮರು ಎಚ್ಚೆತ್ತುಕೊಳ್ಳಲು ಇದು ಸಕಾಲಇಲ್ಲವಾದರೆ ಪಿಎಫ್ ಐ ಸಿ ಎಫ್ ಐ ಜೊತೆ ಎಲ್ಲ ಮುಸ್ಲಿಮರ ಹೆಸರು ಹಾಳಾಗುತ್ತೆ ಎಂದು ರಘುಪತಿ ಭಟ್ ಎಚ್ಚರಿಕೆ ನೀಡಿದ್ದಾರೆ.

ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…?

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago