Featured

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರು ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಗೆ ಶಾಸಕ ಯಶ್ಪಾಲ್  ಮನವಿ – vishwanews24

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರು ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಗೆ ಶಾಸಕ ಯಶ್ಪಾಲ್  ಮನವಿ

ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಶಿಕ್ಷಣ ಕಾಶಿ ಎಂದು ಪ್ರಸಿದ್ಧಿ ಹೊಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ನಿರಂತರ ಉತ್ತಮ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಉಡುಪಿ ಜಿಲ್ಲೆಯು ಭೂ, ಜಲ, ರೈಲ್ವೇ ಮತ್ತು ವಾಯು ಸಾರಿಗೆಯ ಸಂಪರ್ಕದೊಂದಿಗೆ ನಾಲ್ಕು ವಿಧದ ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿದ ಜಿಲ್ಲೆಯಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ ಧಾರ್ಮಿಕ ಕೇಂದ್ರ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ವ್ಯವಸ್ಥೆ, ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಪ್ರತಿ ವರ್ಷವೂ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪೂರ್ಣಗೊಳಿಸಿ, ತೇರ್ಗಡೆ ಹೊಂದುತ್ತಿದ್ದು, ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕೆ ಸೂಕ್ತವಾದ ಉದ್ಯೋಗ ಅವಕಾಶ ದೊರಕದೆ, ಉದ್ಯೋಗ ಅರಸಿ ಹೊರ ಜಿಲ್ಲೆ ಯಾ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯಿದೆ. ಜಿಲ್ಲೆಯ ಪ್ರತಿಭಾವಂತ ಪದವೀಧರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.

ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಅರಸಿ ಹೊರ ಊರುಗಳಿಗೆ ವಲಸೆ ಹೋಗುವ ಪದವೀಧರರಿಗೆ ಜಿಲ್ಲೆಯಲ್ಲಿಯೇ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಉದ್ಯಾನವನ (ಐಟಿ-ಬಿಟಿ ಪಾರ್ಕ್) ಯೋಜನೆ ಸರಕಾರದ ವತಿಯಿಂದ ಅಥವಾ ಖಾಸಗಿ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಕ್ರಮ ವಹಿಸುವಂತೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

15 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

15 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

15 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago