ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.
ಶಿಕ್ಷಣ ಕಾಶಿ ಎಂದು ಪ್ರಸಿದ್ಧಿ ಹೊಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ನಿರಂತರ ಉತ್ತಮ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ.
ಉಡುಪಿ ಜಿಲ್ಲೆಯು ಭೂ, ಜಲ, ರೈಲ್ವೇ ಮತ್ತು ವಾಯು ಸಾರಿಗೆಯ ಸಂಪರ್ಕದೊಂದಿಗೆ ನಾಲ್ಕು ವಿಧದ ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿದ ಜಿಲ್ಲೆಯಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ ಧಾರ್ಮಿಕ ಕೇಂದ್ರ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ವ್ಯವಸ್ಥೆ, ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.
ಪ್ರತಿ ವರ್ಷವೂ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪೂರ್ಣಗೊಳಿಸಿ, ತೇರ್ಗಡೆ ಹೊಂದುತ್ತಿದ್ದು, ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕೆ ಸೂಕ್ತವಾದ ಉದ್ಯೋಗ ಅವಕಾಶ ದೊರಕದೆ, ಉದ್ಯೋಗ ಅರಸಿ ಹೊರ ಜಿಲ್ಲೆ ಯಾ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯಿದೆ. ಜಿಲ್ಲೆಯ ಪ್ರತಿಭಾವಂತ ಪದವೀಧರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.
ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಅರಸಿ ಹೊರ ಊರುಗಳಿಗೆ ವಲಸೆ ಹೋಗುವ ಪದವೀಧರರಿಗೆ ಜಿಲ್ಲೆಯಲ್ಲಿಯೇ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಉದ್ಯಾನವನ (ಐಟಿ-ಬಿಟಿ ಪಾರ್ಕ್) ಯೋಜನೆ ಸರಕಾರದ ವತಿಯಿಂದ ಅಥವಾ ಖಾಸಗಿ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಕ್ರಮ ವಹಿಸುವಂತೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…