ಉಡುಪಿ: ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ (NCB) vನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಬೇಧಿಸಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಶಂಕೆ ವ್ಯಕ್ತವಾಗಿದೆ. ತಮಿಳು ಮೂಲದ ಆರೋಪಿ ಜಾಯಲ್ ಅಲ್ಬಾ ಎಂಬಾತನನ್ನು ಎನ್ಸಿಬಿ ಅಧಿಕಾರಿಗಳು ಉಡುಪಿಯಲ್ಲಿ ಬಂಧಿಸಿದ್ದಾರೆ.
ಭಾರತದ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಕಳೆದ ಮೇ ತಿಂಗಳಲ್ಲಿ ‘ಆಪರೇಷನ್ ಮೇಡ್ ಮ್ಯಾಕ್ಸ್’ ಹೆಸರಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಸೇರಿದಂತೆ ಹತ್ತಕ್ಕೂ ಹೆಚ್ಚು ದೇಶಗಳು ಮತ್ತು ನಾಲ್ಕು ಖಂಡಗಳಲ್ಲಿ ಕಾರ್ಯಚರಣೆಗೆ ಇಳಿದಿತ್ತು.
ದೆಹಲಿ, ಜೈಪುರ, ಉಡುಪಿ ಹಾಗೂ ರೂರ್ಕಿ ಎಲ್ಲಿ ನಡೆಸಿದ್ದ ಕಾರ್ಯಾಚರಣೆ ಬಗ್ಗೆ ಟ್ವೀಟ್ ಮಾಡುವ ಮೂಲಕ ಗ್ರಹ ಸಚಿವ ಅಮಿತ್ ಶಾ ಖಚಿತಪಡಿಸಿದ್ದರು. ಉಡುಪಿ ಸೇರಿದಂತೆ ನಾಲ್ಕು ಪಟ್ಟಣಗಳಿಂದ ಆರೋಪಿಗಳನ್ನು ಎನ್ಸಿಬಿ ವಶಕ್ಕೆ ಪಡೆದಿತ್ತು. ಉಡುಪಿಯನ್ನು ಕೇಂದ್ರವಾಗಿಟ್ಟುಕೊಂಡು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯಾಚರಿಸುತ್ತಿದ್ದ ಶಂಕೆ ವ್ಯಕ್ತವಾಗಿತ್ತು.
ವಿದೇಶಗಳಲ್ಲಿ ನಿಷೇಧಿತ ಔಷಧಿ (ನಾರ್ ಕೋಟಿಕ್ಸ್ ಒಳಗೊಂಡ) ಪೂರೈಸುವ ಜಾಲ ಇದಾಗಿದ್ದು, ಆನ್ಲೈನ್ಜಾಹೀರಾತು ಮತ್ತು ಫೋನ್ ಸಂಖ್ಯೆ ಹಂಚಿ ವಿದೇಶಗಳಲ್ಲಿ ಡ್ರಗ್ಸ್ ವಿತರಣೆ ಮಾಡಲಾಗುತ್ತಿತ್ತು. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಅನುಮಾನಗಳು ಮೂಡಿವೆ. ಉಡುಪಿಯಲ್ಲಿ ತಮಿಳು ಮೂಲದ ವ್ಯಕ್ತಿಯ ಮೂಲಕ ಕಾರ್ಯಾಚರಣೆ ನಡೆದಿತ್ತು. ಸದ್ಯ ಆತನ ಬಂಧನವಾಗಿದೆ. ದೆಹಲಿ ಮೂಲಕ ಇತರ ದೇಶಗಳಿಗೆ ಡ್ರಗ್ಸ್ ಸರಬರಾಜಾಗುತ್ತಿತ್ತು. ಒಂದು ತಿಂಗಳ ಹಿಂದೆ ಎನ್ಸಿಬಿ ಅಧಿಕಾರಿಗಳಿಂದ ದೆಹಲಿ ಮೂಲದ ಮುಖ್ಯಸ್ಥ ನನ್ನು ಬಂಧಿಸಲಾಗಿತ್ತು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…