ಉಡುಪಿ: ಭಾರತೀಯ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ (NCB) vನ್ನು ಕೇಂದ್ರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತು ಜಾಲವನ್ನು ಬೇಧಿಸಿದ್ದು, ಎಂಟು ಜನರನ್ನು ಬಂಧಿಸಲಾಗಿದೆ. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಶಂಕೆ ವ್ಯಕ್ತವಾಗಿದೆ. ತಮಿಳು ಮೂಲದ ಆರೋಪಿ ಜಾಯಲ್ ಅಲ್ಬಾ ಎಂಬಾತನನ್ನು ಎನ್ಸಿಬಿ ಅಧಿಕಾರಿಗಳು ಉಡುಪಿಯಲ್ಲಿ ಬಂಧಿಸಿದ್ದಾರೆ.
ಭಾರತದ ಮಾದಕ ದ್ರವ್ಯ ನಿಯಂತ್ರಣ ಬ್ಯುರೋ ಕಳೆದ ಮೇ ತಿಂಗಳಲ್ಲಿ ‘ಆಪರೇಷನ್ ಮೇಡ್ ಮ್ಯಾಕ್ಸ್’ ಹೆಸರಲ್ಲಿ ಅಮೆರಿಕ, ಆಸ್ಟ್ರೇಲಿಯಾ, ಭಾರತ ಸೇರಿದಂತೆ ಹತ್ತಕ್ಕೂ ಹೆಚ್ಚು ದೇಶಗಳು ಮತ್ತು ನಾಲ್ಕು ಖಂಡಗಳಲ್ಲಿ ಕಾರ್ಯಚರಣೆಗೆ ಇಳಿದಿತ್ತು.
ದೆಹಲಿ, ಜೈಪುರ, ಉಡುಪಿ ಹಾಗೂ ರೂರ್ಕಿ ಎಲ್ಲಿ ನಡೆಸಿದ್ದ ಕಾರ್ಯಾಚರಣೆ ಬಗ್ಗೆ ಟ್ವೀಟ್ ಮಾಡುವ ಮೂಲಕ ಗ್ರಹ ಸಚಿವ ಅಮಿತ್ ಶಾ ಖಚಿತಪಡಿಸಿದ್ದರು. ಉಡುಪಿ ಸೇರಿದಂತೆ ನಾಲ್ಕು ಪಟ್ಟಣಗಳಿಂದ ಆರೋಪಿಗಳನ್ನು ಎನ್ಸಿಬಿ ವಶಕ್ಕೆ ಪಡೆದಿತ್ತು. ಉಡುಪಿಯನ್ನು ಕೇಂದ್ರವಾಗಿಟ್ಟುಕೊಂಡು ಕಾಲ್ ಸೆಂಟರ್ ಮಾದರಿಯಲ್ಲಿ ಕಾರ್ಯಾಚರಿಸುತ್ತಿದ್ದ ಶಂಕೆ ವ್ಯಕ್ತವಾಗಿತ್ತು.
ವಿದೇಶಗಳಲ್ಲಿ ನಿಷೇಧಿತ ಔಷಧಿ (ನಾರ್ ಕೋಟಿಕ್ಸ್ ಒಳಗೊಂಡ) ಪೂರೈಸುವ ಜಾಲ ಇದಾಗಿದ್ದು, ಆನ್ಲೈನ್ಜಾಹೀರಾತು ಮತ್ತು ಫೋನ್ ಸಂಖ್ಯೆ ಹಂಚಿ ವಿದೇಶಗಳಲ್ಲಿ ಡ್ರಗ್ಸ್ ವಿತರಣೆ ಮಾಡಲಾಗುತ್ತಿತ್ತು. ಗ್ರಾಹಕರ ಕರೆಗಳನ್ನು ಸ್ವೀಕರಿಸಲು ಉಡುಪಿಯಲ್ಲಿ ಕಾಲ್ ಸೆಂಟರ್ ಇದ್ದ ಅನುಮಾನಗಳು ಮೂಡಿವೆ. ಉಡುಪಿಯಲ್ಲಿ ತಮಿಳು ಮೂಲದ ವ್ಯಕ್ತಿಯ ಮೂಲಕ ಕಾರ್ಯಾಚರಣೆ ನಡೆದಿತ್ತು. ಸದ್ಯ ಆತನ ಬಂಧನವಾಗಿದೆ. ದೆಹಲಿ ಮೂಲಕ ಇತರ ದೇಶಗಳಿಗೆ ಡ್ರಗ್ಸ್ ಸರಬರಾಜಾಗುತ್ತಿತ್ತು. ಒಂದು ತಿಂಗಳ ಹಿಂದೆ ಎನ್ಸಿಬಿ ಅಧಿಕಾರಿಗಳಿಂದ ದೆಹಲಿ ಮೂಲದ ಮುಖ್ಯಸ್ಥ ನನ್ನು ಬಂಧಿಸಲಾಗಿತ್ತು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…