ಉಡುಪಿ:ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಮುದಾಯಗಳ ಒಕ್ಕೂಟ ಬೆಂಗಳೂರು, ಉಡುಪಿ, ತಾಳಿಪಾಡಿ ಶಿವಳ್ಳಿ ಪಡುಪಣಂಬೂರು, ಬ್ರಹ್ಮಾವರ ಮಂಗಳೂರು ಬಸ್ರೂರು,ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈ ಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮ ಅಗಸ್ಟ್ 5-6-7 ರಂದು ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿಯ ಅಧ್ಯಕ್ಷರಾದ ರತ್ನಾಕರ ಇಂದ್ರಾಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೈ ಮಗ್ಗದ ಸೀರೆಯನ್ನು ಉಳಿಸಬೇಕೆಂಬ ದೃಷ್ಟಿಯಿಂದ ಹೊಸ ತಲೆಮಾರುಗಳಿಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದೆ ಮತ್ತು ಉಡುಪಿ ಸೀರೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮುಟ್ಟಿಸುವ ಇರಾದೆಯನ್ನಿಟ್ಟುಕೊಂಡು ಈ ಉತ್ಸವ ನಡೆಯಲಿದೆ ಎಂದರು.
ಕೈ ಮಗ್ಗದ ನೇಯ್ಗೆ ಅಂದು ಇಂದು ಮುಂದು ವಿಚಾರ ಸಂಕಿರಣ ಕಾರ್ಯಕ್ರಮ ನೇಕಾರಿಕೆಯ ಭವಿಷ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಚಿಂತನಮಂಥನ ನಡೆಯಲಿದ್ದು ಅದರ ಜತೆಗೆ ಸಾರ್ವಜನಿಕರಿಗಾಗಿ ಉಡುಪಿ ಕೈಮಗ್ಗ ಸೀರೆಗಳ ಸೌಂದರ್ಯ ಸ್ಪರ್ಧೆಯಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ಮಣಿಪಾಲ,ಜ್ಯೋತಿ ಪ್ರಸಾದ್ ಶೆಟ್ಟಿಗಾರ್,ದಿನೇಶ್ ಕುಮಾರ್,ಹರೀಶ್ ಶೆಟ್ಟಿಗಾರ್ ಏರ್ಮಾಳು,ಅವಿನಾಶ್ ಶೆಟ್ಟಿಗಾರ್ ಮಾರ್ಪಳ್ಳಿ,ನರೇಂದ್ರ ಶೆಟ್ಟಿಗಾರ ಹೆರ್ಗ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…