ಉಡುಪಿ:ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿ ಇವರ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಸಮುದಾಯಗಳ ಒಕ್ಕೂಟ ಬೆಂಗಳೂರು, ಉಡುಪಿ, ತಾಳಿಪಾಡಿ ಶಿವಳ್ಳಿ ಪಡುಪಣಂಬೂರು, ಬ್ರಹ್ಮಾವರ ಮಂಗಳೂರು ಬಸ್ರೂರು,ಮಿಜಾರು ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಕೈ ಮಗ್ಗ ಸೀರೆಗಳ ಉತ್ಸವ ಕಾರ್ಯಕ್ರಮ ಅಗಸ್ಟ್ 5-6-7 ರಂದು ಉಡುಪಿಯ ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಪದ್ಮಶಾಲಿ ನೇಕಾರ ಪ್ರತಿಷ್ಠಾನ ಉಡುಪಿಯ ಅಧ್ಯಕ್ಷರಾದ ರತ್ನಾಕರ ಇಂದ್ರಾಳಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕೈ ಮಗ್ಗದ ಸೀರೆಯನ್ನು ಉಳಿಸಬೇಕೆಂಬ ದೃಷ್ಟಿಯಿಂದ ಹೊಸ ತಲೆಮಾರುಗಳಿಗೆ ತರಬೇತಿಯನ್ನು ನೀಡುವ ಕೆಲಸ ಮಾಡುತ್ತಿದೆ ಮತ್ತು ಉಡುಪಿ ಸೀರೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಮುಟ್ಟಿಸುವ ಇರಾದೆಯನ್ನಿಟ್ಟುಕೊಂಡು ಈ ಉತ್ಸವ ನಡೆಯಲಿದೆ ಎಂದರು.
ಕೈ ಮಗ್ಗದ ನೇಯ್ಗೆ ಅಂದು ಇಂದು ಮುಂದು ವಿಚಾರ ಸಂಕಿರಣ ಕಾರ್ಯಕ್ರಮ ನೇಕಾರಿಕೆಯ ಭವಿಷ್ಯದ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಚಿಂತನಮಂಥನ ನಡೆಯಲಿದ್ದು ಅದರ ಜತೆಗೆ ಸಾರ್ವಜನಿಕರಿಗಾಗಿ ಉಡುಪಿ ಕೈಮಗ್ಗ ಸೀರೆಗಳ ಸೌಂದರ್ಯ ಸ್ಪರ್ಧೆಯಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ ಮಣಿಪಾಲ,ಜ್ಯೋತಿ ಪ್ರಸಾದ್ ಶೆಟ್ಟಿಗಾರ್,ದಿನೇಶ್ ಕುಮಾರ್,ಹರೀಶ್ ಶೆಟ್ಟಿಗಾರ್ ಏರ್ಮಾಳು,ಅವಿನಾಶ್ ಶೆಟ್ಟಿಗಾರ್ ಮಾರ್ಪಳ್ಳಿ,ನರೇಂದ್ರ ಶೆಟ್ಟಿಗಾರ ಹೆರ್ಗ ಮೊದಲಾದವರು ಉಪಸ್ಥಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…