ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು ಮತ್ತೆ 27 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ. ದುಬೈ ಮತ್ತು ಮಹಾರಾಷ್ಟ್ರದಿಂದ ಬರುತ್ತಿರುವ ಜನರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಜಿಲ್ಲೆಯ ಜನತೆಯ ಚಿಂತೆಗೆ ಕಾರಣವಾಗಿದೆ.
ಇಂದಿನ ಹೊಸ 27 ಪ್ರಕರಣಗಳ ಪೈಕಿ 16 ಸೋಂಕಿತರು ಹತ್ತು ವರ್ಷಕ್ಕಿಂತ ಕೆಳಗಿನ ಮಕ್ಕಳಾಗಿದ್ದಾರೆ.
ಮಹಾರಾಷ್ಟ್ರದ ಮಲ್ಲಚಾಂದಿವಲ್ಲಿ, ಮುಂಬೈ, ಸಾಯಿಲ್, ಥಾಣೆ, ಪುಣೆ ಸೇರಿದಂತೆ, ತೆಲಂಗಾಣ, ಕೇರಳದಿಂದ ಬಂದವರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಉಡುಪಿ ಜಿಲ್ಲೆಗೆ ಸೇರಿದ ಇಬ್ಬರು ಉತ್ತರ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ 23, ತೆಲಂಗಾಣದಿಂದ 3, ಕೇರಳದಿಂದ ಆಗಮಿಸಿದ ಓರ್ವ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಇದರಲ್ಲಿ ಆರು ಮಂದಿ ಗಂಡಸರು, ಐದು ಮಂದಿ ಹೆಂಗಸರು, 16 ಮಕ್ಕಳು.
ಮುಂಬಯಿಂದ ಹಾಗೂ ದುಬೈಯಿಂದ ಉಡುಪಿಗೆ ಆಗಮಿಸಿದವರಿಂದ ಗುರುವಾರ ಮತ್ತಷ್ಟು ಕೊರೊನಾ ಪಾಸಿಟಿವ್ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ.
ಮೇ 15 ರಂದು ದುಬೈಯಿಂದ ಆಗಮಿಸಿದ ಆರು ಮಂದಿಯಲ್ಲಿ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡ ಬಳಿಕ ಮೇ 20 ರವರೆಗೆ ಮತ್ತೆ ಹೊಸದಾಗಿ 18 ಪ್ರಕರಣಗಳು ವರದಿಯಾಗಿವೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…