ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಇಂದು ಮತ್ತೆ 27 ಹೊಸ ಸೋಂಕು ಪ್ರಕರಣ ಪತ್ತೆಯಾಗಿದೆ. ದುಬೈ ಮತ್ತು ಮಹಾರಾಷ್ಟ್ರದಿಂದ ಬರುತ್ತಿರುವ ಜನರಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದು ಜಿಲ್ಲೆಯ ಜನತೆಯ ಚಿಂತೆಗೆ ಕಾರಣವಾಗಿದೆ.
ಇಂದಿನ ಹೊಸ 27 ಪ್ರಕರಣಗಳ ಪೈಕಿ 16 ಸೋಂಕಿತರು ಹತ್ತು ವರ್ಷಕ್ಕಿಂತ ಕೆಳಗಿನ ಮಕ್ಕಳಾಗಿದ್ದಾರೆ.
ಮಹಾರಾಷ್ಟ್ರದ ಮಲ್ಲಚಾಂದಿವಲ್ಲಿ, ಮುಂಬೈ, ಸಾಯಿಲ್, ಥಾಣೆ, ಪುಣೆ ಸೇರಿದಂತೆ, ತೆಲಂಗಾಣ, ಕೇರಳದಿಂದ ಬಂದವರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಉಡುಪಿ ಜಿಲ್ಲೆಗೆ ಸೇರಿದ ಇಬ್ಬರು ಉತ್ತರ ಕನ್ನಡ ಜಿಲ್ಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಿಂದ ಆಗಮಿಸಿದ 23, ತೆಲಂಗಾಣದಿಂದ 3, ಕೇರಳದಿಂದ ಆಗಮಿಸಿದ ಓರ್ವ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಇದರಲ್ಲಿ ಆರು ಮಂದಿ ಗಂಡಸರು, ಐದು ಮಂದಿ ಹೆಂಗಸರು, 16 ಮಕ್ಕಳು.
ಮುಂಬಯಿಂದ ಹಾಗೂ ದುಬೈಯಿಂದ ಉಡುಪಿಗೆ ಆಗಮಿಸಿದವರಿಂದ ಗುರುವಾರ ಮತ್ತಷ್ಟು ಕೊರೊನಾ ಪಾಸಿಟಿವ್ ಬರುವ ಸಾಧ್ಯತೆ ಇದೆ ಎಂಬ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದುಬಂದಿದೆ.
ಮೇ 15 ರಂದು ದುಬೈಯಿಂದ ಆಗಮಿಸಿದ ಆರು ಮಂದಿಯಲ್ಲಿ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡ ಬಳಿಕ ಮೇ 20 ರವರೆಗೆ ಮತ್ತೆ ಹೊಸದಾಗಿ 18 ಪ್ರಕರಣಗಳು ವರದಿಯಾಗಿವೆ.
ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ 42 ರೂ. ಏರಿಕೆ ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…