ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಗ್ಲಾಮರ್ ಸಚಿವೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಯಮಾಲಾ ಉಡುಪಿ ಜಿಲ್ಲಾ ಉಸ್ತುವಾರಿಯ ಜವಬ್ದಾರಿ ತೆಗೆದುಕೊಂಡ ಬಳಿಕ ಇಲ್ಲಿ ಅವರದ್ದೇ ಹವಾ ಕ್ರೀಯೆಟ್ ಆಗಿದೆ. ಸಚಿವೆ ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ, ಎಂದು ಸಚಿವೆಯನ್ನು ಮಾಜಿ ಸಚಿವರು ಹಾಡಿ ಹೊಗಳಿದ್ದಾರೆ.
‘ ಉಡುಪಿಯಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲ್ಯಾಮರ್ ಯಾರಿಗಿದೆ.? ವೆರೀ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್. ನನಗಿಂತ ಅವರೇ ಹೆಚ್ಚು ಗ್ಲ್ಯಾಮರಸ್ ಆಗಿದ್ದಾರೆ ‘ ಎಂದು ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ.
ಸೂರ್ಯ ಚಂದ್ರ ಇರುವ ತನಕ ಕಾಂಗ್ರೆಸ್ ಪಕ್ಷ ಇರಲಿದೆ
‘ ಕಾಂಗ್ರೆಸ್ ಪಕ್ಷ ಆನೆ ಇದ್ದ ಹಾಗೆ, ಎಷ್ಟು ಚಿಕ್ಕ ಚಿತ್ರ ಬರೆದರೂ ಅದು ಆನೆಯೇ, ಸೂರ್ಯಚಂದ್ರ ಇರುವ ತನಕ ಕಾಂಗ್ರೆಸ್ ಇರುತ್ತದೆ ಕಾಂಗ್ರೆಸ್ ಪಕ್ಷವನ್ನು ಯಾರಿಂದಲೂ ಅಳಿಸಲು ಸಾಧ್ಯವೇ ಇಲ್ಲ, ಕಾಂಗ್ರೆಸ್ ಬಹಳ ಪ್ರಾಚೀನವಾದ ಪಕ್ಷ, ನಾನು ಬಿಟ್ಟರೂ ಕಾಂಗ್ರೆಸ್ ಪಕ್ಷ ಉಳಿಯುತ್ತದೆ ‘ ಎಂದು ಮಧ್ವರಾಜ್ ಹೇಳಿದ್ದಾರೆ.
‘ ಯಾರು ಇಲ್ಲದಿದ್ದರೂ ಕಾಂಗ್ರೆಸ್ ಪಕ್ಷವನ್ನು ಮುಕ್ತ ಮಾಡಲು ಅಸಾಧ್ಯ. ಹಾಗಂತ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ. ಚುನಾವಣಾ ವಾತಾವರಣ ಕಾಂಗ್ರೆಸ್ ಪರವಾಗಿದೆ. ಬಿಜೆಪಿ ಶಾಸಕರ ಹಣೆಬರಹ ಏನಂತ ಜನಕ್ಕೆ ಗೊತ್ತಾಗಿದೆ ಈಗ ‘ ಎಂದಿದ್ದಾರೆ.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…