ಉಡುಪಿಯಲ್ಲಿ ಡೆಡ್ಲಿ ಶಂಕಿತ ಕೊರೋನ, ಕಾರ್ಕಳದ ವ್ಯಕ್ತಿ ಜಿಲ್ಲಾಸ್ಪತ್ರೆಗೆ ದಾಖಲು -Vishwanews24
ಉಡುಪಿ, : ಇಸ್ರೇಲಿನಿಂದ ಹಿಂದಿರುಗಿದ ಕಾರ್ಕಳ ತಾಲೂಕು ಮುನಿಯಾಲಿನ 75ರ ಹರೆಯ ವ್ಯಕ್ತಿಯೊಬ್ಬರು ಶಂಕಿತ ಕೊರೋನ ವೈರಸ್ ಪರೀಕ್ಷೆಗಾಗಿ ಉಡುಪಿ ಜಿಲ್ಲಾಸ್ಪತ್ರೆಯಲ್ಲಿರುವ ಪ್ರತ್ಯೇಕಿತ ವಾರ್ಡ್ಗೆ ಕಳೆದ ರಾತ್ರಿ ದಾಖಲಾಗಿದ್ದಾರೆ.
ತನ್ನ ಪತ್ನಿಯೊಂದಿಗೆ ಇಸ್ರೇಲಿನಲ್ಲಿ ಉದ್ಯೋಗದಲ್ಲಿರುವ ಪುತ್ರನ ಬಳಿ ತೆರಳಿದ್ದ ಇವರು ಬುಧವಾರ ಅಪರಾಹ್ನವಷ್ಟೇ ಸ್ವದೇಶಕ್ಕೆ ಮರಳಿದ್ದರು. ಕೆಮ್ಮು ಹಾಗೂ ನೆಗಡಿ ಇದ್ದ ಇವರ ಬಗ್ಗೆ ಮಾಹಿತಿ ಪಡೆದ ಜಿಲ್ಲಾಸ್ಪತ್ರೆಯ ಕಾರ್ಯಪಡೆ, ಅವರ ಮನೆಗೆ ತೆರಳಿ ತಡ ರಾತ್ರಿ ಅವರನ್ನು ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ವಿಶೇಷ ವಾರ್ಡ್ಗೆ ದಾಖಲು ಮಾಡಿದೆ.
ಇದೀಗ 75ರ ಹರೆಯದ ವ್ಯಕ್ತಿಯ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರು ಮೆಡಿಕಲ್ ಕಾಲೇಜಿನ ಪ್ರಯೋಗಾಲಯಕ್ಕೆ ಈಗಾಗಲೇ ರವಾನಿಸಲಾಗಿದೆ. ಶನಿವಾರದೊಳಗೆ ಇದರ ಪರೀಕ್ಷಾ ವರದಿ ಬರುವ ನಿರೀಕ್ಷೆ ಇದೆ ಎಂದು ಜಿಲ್ಲಾಸ್ಪತ್ರೆ ಮೂಲಗಳು ತಿಳಿಸಿವೆ.
ವೃದ್ಧರು ಅಧಿಕ ರಕ್ತದೊತ್ತಡ, ಮಧುಮೇಹದೊಂದಿಗೆ ಲಘುವಾದ ಅಸ್ತಮಾ ಸಮಸ್ಯೆಯನ್ನು ಹೊಂದಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಾವು ಅವರನ್ನು ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್ಗೆ ದಾಖಲು ಮಾಡಿದ್ದೇವೆ. ಅವರೊಂದಿಗೆ ತೆರಳಿದ್ದ ಪತ್ನಿ ಸಂಪೂರ್ಣ ಆರೋಗ್ಯದಿಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…