ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ : ಶೋಭಾ ಕರಂದ್ಲಾಜೆ ಭಾವುಕ – Vishwanews24

Featured, ಉಡುಪಿ

ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ..

ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ..

ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ..

ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ..

ನೀವು ಕೊಟ್ಟ ವೋಟಿಗೆ ಮಾನ ಮರ್ಯಾದೆ ಬರುವಂತೆ ನಡೆದುಕೊಂಡಿದ್ದೇನೆ..

ಉಡುಪಿಯಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಶೋಭಾ ಕರಂದ್ಲಾಜೆ

ಉಡುಪಿ: ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ. ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ ಎಂದು ಶೋಭಾ ಕರಂದ್ಲಾಜೆ ಭಾವುಕರಾಗಿ ಹೇಳಿದರು.

ಉಡುಪಿಯಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ. ಒಬ್ಬ ಗುತ್ತಿಗೆದಾರನನ್ನು ಕೂಡ ನಾನು ಮಾತನಾಡಿಸಿಲ್ಲ. ಇನ್ನೊಬ್ಬರ ಮುಂದೆ ಕೈ ಚಾಚದೆ ಕೆಲಸ ಮಾಡುತ್ತಿದ್ದೇನೆ ಎಂದರು.

ವ್ಯವಹಾರ ಮಾಡದೆ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ನೀವು ಕೊಟ್ಟ ವೋಟಿಗೆ ಮಾನ ಮರ್ಯಾದೆ ಬರುವಂತೆ ನಡೆದುಕೊಂಡಿದ್ದೇನೆ. ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ. ಅತ್ಯಂತ ಪ್ರಾಮಾಣಿಕವಾಗಿ ನನ್ನ ರಾಜಕಾರಣ ಮಾಡಿದ್ದೇನೆ. ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ. ನೀವೆಲ್ಲ ದುಡಿದ ಕಾರಣಕ್ಕೆ ನಾನು ಜನಪ್ರತಿನಿಧಿಯಾಗಿದ್ದೇನೆ ಎಂದು ಹೇಳಿದರು.

ಉಡುಪಿ : ನೇಜಾರು ಕೊಲೆ ಪ್ರಕರಣ – ಮುಂದಿನ  ವಿಚಾರಣೆಗಾಗಿ ಪ್ರಕರಣ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ – Vishwanews24

ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ. ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಬೆಂಗಳೂರಿನ ಜನ ನನ್ನನ್ನು ಯಶವಂತಪುರದಲ್ಲಿ ಗೆಲ್ಲಿಸಿದರು.. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ. ಕಾರ್ಯಕರ್ತರೆಲ್ಲರೂ ಕುಣಿದು ಕುಪ್ಪಳಿಸುವ ಫಲಿತಾಂಶ ಬರಲಿದೆ. ನಾವು ಪಾರ್ಟಿ ಏನು ಹೇಳುತ್ತೋ ಅದನ್ನು ಕೇಳುವವರು. ಟಿಕೆಟಿಗಾಗಿ ಅವರು ಇವರು ಓಡಾಡುತ್ತಿದ್ದಾರೆ. ಟಿಕೆಟ್ ಗೆ ಯಾರೇ ಓಡಾಡಲಿ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದರು.

Leave a Reply