ಉಡುಪಿ: ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ನೀವೆಲ್ಲರೂ ಕೆಲಸ ಮಾಡಿ ಗೆಲ್ಲಿಸಿದ ಕಾರಣಕ್ಕೆ ಇಂದು ನಾನು ಕೇಂದ್ರ ಸಚಿವೆಯಾಗಿದ್ದೇನೆ. ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ ಎಂದು ಶೋಭಾ ಕರಂದ್ಲಾಜೆ ಭಾವುಕರಾಗಿ ಹೇಳಿದರು.
ಉಡುಪಿಯಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇನೆ. ಒಬ್ಬ ಗುತ್ತಿಗೆದಾರನನ್ನು ಕೂಡ ನಾನು ಮಾತನಾಡಿಸಿಲ್ಲ. ಇನ್ನೊಬ್ಬರ ಮುಂದೆ ಕೈ ಚಾಚದೆ ಕೆಲಸ ಮಾಡುತ್ತಿದ್ದೇನೆ ಎಂದರು.
ವ್ಯವಹಾರ ಮಾಡದೆ ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ನೀವು ಕೊಟ್ಟ ವೋಟಿಗೆ ಮಾನ ಮರ್ಯಾದೆ ಬರುವಂತೆ ನಡೆದುಕೊಂಡಿದ್ದೇನೆ. ಯಾರ ಬಳಿಯಲ್ಲೂ ಒಂದು ಚಹಾ ಕುಡಿದಿಲ್ಲ. ಅತ್ಯಂತ ಪ್ರಾಮಾಣಿಕವಾಗಿ ನನ್ನ ರಾಜಕಾರಣ ಮಾಡಿದ್ದೇನೆ. ಉಡುಪಿಯಲ್ಲಿ ನಾನು ಪ್ರಾಮಾಣಿಕ ರಾಜಕೀಯ ಮಾಡಿದ್ದೇನೆ. ನೀವೆಲ್ಲ ದುಡಿದ ಕಾರಣಕ್ಕೆ ನಾನು ಜನಪ್ರತಿನಿಧಿಯಾಗಿದ್ದೇನೆ ಎಂದು ಹೇಳಿದರು.
ನಾನು ಉಡುಪಿ-ಚಿಕ್ಕಮಗಳೂರು ಜಿಲ್ಲೆಯವಳಲ್ಲ. ಆದರೂ ನನ್ನನ್ನು ಎರಡು ಬಾರಿ ನೀವು ಗೆಲ್ಲಿಸಿದ್ದೀರಿ. ಬೆಂಗಳೂರಿನ ಜನ ನನ್ನನ್ನು ಯಶವಂತಪುರದಲ್ಲಿ ಗೆಲ್ಲಿಸಿದರು.. ಮೋದಿಯವರು ನನ್ನನ್ನು ಗುರುತಿಸಿ ಕೆಲಸ ಕೊಟ್ಟಿದ್ದಾರೆ. ಕಾರ್ಯಕರ್ತರೆಲ್ಲರೂ ಕುಣಿದು ಕುಪ್ಪಳಿಸುವ ಫಲಿತಾಂಶ ಬರಲಿದೆ. ನಾವು ಪಾರ್ಟಿ ಏನು ಹೇಳುತ್ತೋ ಅದನ್ನು ಕೇಳುವವರು. ಟಿಕೆಟಿಗಾಗಿ ಅವರು ಇವರು ಓಡಾಡುತ್ತಿದ್ದಾರೆ. ಟಿಕೆಟ್ ಗೆ ಯಾರೇ ಓಡಾಡಲಿ ನನಗೆ ಏನೂ ಸಂಬಂಧ ಇಲ್ಲ ಎಂದು ಹೇಳಿದರು.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…