ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರದ ಅಂಗವಾಗಿ, ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಜನಸ್ಪಂದನದ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾಂಗ್ರೆಸ್ ನ ಪರಿವರ್ತನಾ ಯಾತ್ರೆ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ನಾಳೆ ದಿನ ಮಾರ್ಚ್ 10ರಂದು ಭಾನುವಾರ ಉಡುಪಿಯ ಕಲ್ಸಂಕ ರಾಯಲ್ ಗಾರ್ಡನ್ ನಲ್ಲಿ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾರವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಸಚಿವರಾದ ಯು ಟಿ ಖಾದರ್, ಮಾಜಿ ಸಚಿವರಾದ ರಮಾನಾಥರ ರೈ, ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಗೋಪಾಲ ಪೂಜಾರಿ, ಉಡುಪಿ ಉಸ್ತುವಾರಿಯಾಗಿರುವ ಜಿ ಎ ಬಾವಾ, ಮುಖಂಡರಾದ ರಾಕೇಶ್ ಮಲ್ಲಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡವೂರು,
ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಜನಪ್ರತಿನಿಧಿಗಳು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪರಿವರ್ತನಾ ಯಾತ್ರೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಗೊಳಿಸುವಂತೆ ಸಚಿವೆ ಡಾ ಜಯಮಾಲಾ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…