Featured

ಉಡುಪಿಯಲ್ಲಿ ಪುಂಡಾಟಿಕೆ ತೋರಿದ್ದ ಲಕ್ಷ್ಮೀಶ ಸಾವು

ಉಡುಪಿಉಡುಪಿಯಲ್ಲಿ 16 ವರ್ಷಗಳ ಹಿಂದೆ ತನ್ನ ಆಕ್ರೋಶ ತೋರಿಸಿದ್ದ ಶೀರೂರು ಮಠದ ಆನೆ ಲಕ್ಷ್ಮೀಶ ಸೆ. 19ರಂದು ಮೈಸೂರು ಜಿಲ್ಲೆ ಹುಣಸೂರು ಬಳಿ ಕಲ್ಲಳ್ಳದಲ್ಲಿ ಮೃತಪಟ್ಟಿದೆ.  ನಾಗರಹೊಳೆಯ ಮತ್ತಿಗೋಡು ಆನೆ ಶಿಬಿರದಿಂದ 20 ದಿನಗಳ ಹಿಂದೆ ಮದವೇರಿ ನಾಪತ್ತೆಯಾದ ಬಳಿಕ ಲಕ್ಷ್ಮೀಶ ಕಾಡಾನೆ ಹಿಂಡಿನಲ್ಲಿ ಸೇರಿಕೊಂಡು ಜಗಳವಾಡಿ ಪೆಟ್ಟು ತಿಂದಿತ್ತು. ಮಂಗಳವಾರ ಸಂಜೆ ವೇಳೆ ಕೊಳಂಗೇರಿ ಹಾಡಿ ಬಳಿ ಆನೆಯನ್ನು ಪತ್ತೆ ಹಚ್ಚಲಾಗಿತ್ತು.

ಆನೆಯನ್ನು ಶಿಬಿರಕ್ಕೆ ಕರೆ ತರಲು ಪಶುವೈದ್ಯ ಡಾ| ಮುಜೀಬ್‌ ರೆಹಮಾನ್‌ ಅವರು ಅರಿವಳಿಕೆ ಚುಚ್ಚುಮದ್ದು ನೀಡಿದ್ದರು. ಇದರಿಂದ ಜ್ಞಾನತಪ್ಪಿ ಬಳಿಕ ಎಚ್ಚರಗೊಂಡಿದ್ದ ಆನೆ ಅಸ್ವಸ್ಥಗೊಂಡು ಮೃತಪಟ್ಟಿದೆ.

2ನೇ ಪರ್ಯಾಯ ವೇಳೆ ದಾನ 
ಶೀರೂರು ಮಠದ ಶ್ರೀಲಕ್ಷ್ಮೀವರ ತೀರ್ಥರ ಎರಡನೆಯ ಪರ್ಯಾಯ 1994-96ರ ಅವಧಿಯಲ್ಲಿ ಎಂ.ವೀರಪ್ಪ ಮೊಲಿ ಮುಖ್ಯಮಂತ್ರಿಯಾಗಿದ್ದಾಗ ಲಕ್ಷ್ಮೀಶನನ್ನು ದಾನವಾಗಿ ಕೊಡಲಾಗಿತ್ತು. ಈ ಆನೆ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಮೊದಲ ಪರ್ಯಾಯ 2002-04ರ ಅವಧಿಯಲ್ಲಿ ಉಡುಪಿಯಲ್ಲಿ ಪುಂಡಾಟ ನಡೆಸಿತ್ತು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು “ಶೂಟ್‌ ಎಟ್‌ ಸೈಟ್‌’ಗೆ ನಿರ್ಧರಿಸಿದ್ದರು. ಆದರೆ ಶೀರೂರು ಸ್ವಾಮೀಜಿಯವರು ಪೊಲೀಸರ ಮನವೊಲಿಸಿದ್ದರು. ಅನಂತರ ಮೈಸೂರಿನ ಮೃಗಾಲಯದ ವೈದ್ಯರು ಬಂದು ಚಿಕಿತ್ಸೆ ನೀಡಿದ್ದರು. ಅನಂತರ ಶೀರೂರಿನಲ್ಲಿದ್ದ ಆನೆ ಧರ್ಮಸ್ಥಳದಿಂದ ಕಳುಹಿಸಲಾದ ಮಾವುತನಿಂದ ನಿಯಂತ್ರಣಕ್ಕೆ ಬಂದಿತ್ತು. ಬಳಿಕ ವೈದ್ಯರು ನೀಡಿದ ಸಲಹೆಯಂತೆ ಉಪ್ಪಿನಂಗಡಿಗೆ ಕಳುಹಿಸಲಾಯಿತು.

ಸ್ವಾಮೀಜಿ ನಿಧನದ  2 ತಿಂಗಳ ಬಳಿಕ
ಶ್ರೀಲಕ್ಷ್ಮೀವರ ತೀರ್ಥರ ಅಕ್ಕರೆಯಲ್ಲಿ ಬೆಳೆದಿದ್ದ ಲಕ್ಷ್ಮೀಶ ಆನೆ, ಸ್ವಾಮೀಜಿ ತೀರಿಕೊಂಡ 2ತಿಂಗಳ ಬಳಿಕ ಮೃತಪಟ್ಟಿದೆ.ಸ್ವಾಮೀಜಿ ಜು. 19ರಂದು ಮೃತಪಟ್ಟಿದ್ದರೆ ಲಕ್ಷ್ಮೀಶ ಸೆ. 19ರಂದು ಮೃತಪಟ್ಟಿದೆ.

2002ರಲ್ಲಿ ಉಡುಪಿಯಲ್ಲಿ ನಡೆದ ದಾಂಧಲೆಯ ಬಳಿಕ ಲಕ್ಷ್ಮೀಶ ಆನೆಯನ್ನು ನಾನೇ ಸಾಕಿದ್ದೇನೆ. 9-10ವರ್ಷಗಳ ನನ್ನ ಬಳಿ ಇದ್ದ ಆನೆಯನ್ನು 2013ರಲ್ಲಿ ಮತ್ತಿಗೋಡು ಶಿಬಿರಕ್ಕೆ ಒಪ್ಪಿಸಲಾಗಿತ್ತು. ಅಲ್ಲಿಯವರೆಗೆ ಆ ಆನೆ ಶಿರೂರು ಮಠದ ಹೆಸರಿನಲ್ಲೇ ಇತ್ತು. 33ವರ್ಷಗಳ ಕಾಲ ನಾನು ಒಟ್ಟು ಮೂರು ಆನೆಗಳನ್ನು ಸಾಕಿದ್ದೇನೆ. ಆದರೆ ಲಕ್ಷ್ಮೀಶನಂತಹ ಗುಣ ಇರುವ ಆನೆ ಮತ್ತೊಂದಿಲ್ಲ. ಮಾವುತರ ತಪ್ಪಿನಿಂದ ಲಕ್ಷ್ಮೀಶ ಕೆಲವು ಬಾರಿ ಪುಂಡಾಟಿಕೆ ನಡೆಸಿದೆ.
-ಕರುಣಾಕರ ಪೂಜಾರಿ, ಉಪ್ಪಿನಂಗಡಿ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago