ಉಡುಪಿ :ಕಳೆದ ವರ್ಷ ಉಡುಪಿಯ ಪ್ರಸಿದ್ಧ ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಪೇಜಾವರ ಶ್ರೀಗಳ ಈ ನಡೆಯು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಈ ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟವನ್ನೇರ್ಪಡಿಸಲು ಸಿದ್ಧತೆ ನಡೆಸಿದ್ದು, ಉಡುಪಿಯಲ್ಲಿರುವ ಗೋವಿಂದ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲು ತಯಾರಿ ನಡೆಸಲಾಗಿತ್ತು. ಆದರೆ ಇದೀಗ ಇಫ್ತಾರ್ ಕೂಟವನ್ನು ರದ್ದು ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಬಾರಿ ಇಫ್ತಾರ್ ಕೂಟ ನಡೆಸಿದ್ದ ಸಂದರ್ಭದಲ್ಲಿ ಶ್ರೀರಾಮಸೇನೆ ಸೇರಿದಂತೆ ಹಲವು ಸಂಘಟನೆಗಳು ಇದರ ವಿರುದ್ಧವಾಗಿ ಪ್ರತಿಭಟನೆ ನಡೆಸಿದ್ದರು. ಇದೀಗ ಸಂಘಟನೆಗಳು ಸೇರಿದಂತೆ ಹಲವರಿಂದ ಒತ್ತಡಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಇಫ್ತಾರ್ ಕೂಟವನ್ನು ರದ್ದುಗೊಳಿಸಲಾಗಿದೆ ಎಂದು ಪೇಜಾವರ ಸ್ವಾಮೀಜಿ ಬ್ಲಡ್ ಡೊನೇಟಿಂಗ್ ತಂಡದ ಅನ್ಸಾರ್ ಅಹ್ಮದ್ ಹಾಗೂ ಆರೀಫ್ ದೊಡ್ಡಣಗುಡ್ಡೆ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…