Featured

ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ಕಟ್ಟಿಹಾಕಲು ಆರ್‌ಎಸ್‌ಎಸ್ ಪ್ಲಾನ್!

ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಆರ್‌ಎಸ್‌ಎಸ್ ಪ್ಲಾನ್ ಮಾಡಿದೆ.

ಪ್ರಮೋದ್ ಮಧ್ವರಾಜ್ ಅವರನ್ನು ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಆರ್‌ಎಸ್‌ಎಸ್ ಸೈಲೆಂಟಾಗಿ ಸ್ಕೆಚ್ ಹಾಕಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ಇಳಿಸಲು ಮಾಸ್ಟರ್ ಪ್ಲಾನ್ ಮಾಡಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್ ಗೆ ಬಿಜೆಪಿ ಟಿಕೆಟ್ ಕೊಡಲು ನಿರ್ಧರಿಸಿದೆ. ಮೊಗವೀರ ಸಮುದಾಯದ ನಯನ ಗಣೇಶ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಗೇಮ್ ಪ್ಲಾನ್ ಮಾಡಿದೆ. ಬಿಜೆಪಿ ಹೈಕಮಾಂಡ್ ಗೆ ನಯನ ಗಣೇಶ್ ಅವರ ಹೆಸರನ್ನು ಆರ್‌ಎಸ್‌ಎಸ್ ಸೂಚಿಸಿದೆ. ಈ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಮತದಾರರ ಸೆಳೆಯಲು ಯತ್ನ ಮಾಡಿದೆ ಎನ್ನಲಾಗಿದೆ.

 

ಜಿಲ್ಲೆಯಲ್ಲಿ ಮೊಗವೀರ ಮಹಿಳೆಗೆ ಸೀಟ್ ಕೊಟ್ಟರೆ ಕಾಪು, ಕುಂದಾಪುರ, ಬೈಂದೂರು ಕ್ಷೇತ್ರದ ಮೊಗವೀರ ಮತಕ್ಕೂ ಬಲೆ ಬೀಸಲು ಸುಲಭವಾಗುತ್ತದೆ ಎಂಬುದು ಬಿಜೆಪಿಯ ಪ್ಲಾನ್. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಈಗಾಗಲೇ ಐದಾರು ಹೆಸರು ಸಾಲಿನಲ್ಲಿದೆ. ಇದೀಗ ಮೊದಲ ಬಾರಿಗೆ ನಯನ ಗಣೇಶ್ ಹೆಸರು ಕೇಳಿ ಬಂದಿದೆ. ಕಳಂಕ ರಹಿತರನ್ನು ಇಳಿಸಿದ್ರೆ ಸುಲಭವಾಗಿ ಪ್ರಚಾರಕ್ಕೆ ಹೋಗಬಹುದು. ಎದುರಾಳಿಗೆ ದಾಳಿ ಮಾಡಲು ವಿಷಯಗಳೇ ಇರಬಾರದು ಎಂಬುದು ಬಿಜೆಪಿಯ ವಾದ. ತಳಮಟ್ಟದಲ್ಲಿ ನಾವು ಕ್ಯಾಂಪೇನ್ ಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಭರವಸೆ ಕೊಟ್ಟಿದೆ ಎಂಬ ಮಾಹಿತಿಯಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago