ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಆರ್ಎಸ್ಎಸ್ ಪ್ಲಾನ್ ಮಾಡಿದೆ.
ಪ್ರಮೋದ್ ಮಧ್ವರಾಜ್ ಅವರನ್ನು ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಆರ್ಎಸ್ಎಸ್ ಸೈಲೆಂಟಾಗಿ ಸ್ಕೆಚ್ ಹಾಕಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ಇಳಿಸಲು ಮಾಸ್ಟರ್ ಪ್ಲಾನ್ ಮಾಡಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್ ಗೆ ಬಿಜೆಪಿ ಟಿಕೆಟ್ ಕೊಡಲು ನಿರ್ಧರಿಸಿದೆ. ಮೊಗವೀರ ಸಮುದಾಯದ ನಯನ ಗಣೇಶ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮತ್ತು ಆರ್ಎಸ್ಎಸ್ ಗೇಮ್ ಪ್ಲಾನ್ ಮಾಡಿದೆ. ಬಿಜೆಪಿ ಹೈಕಮಾಂಡ್ ಗೆ ನಯನ ಗಣೇಶ್ ಅವರ ಹೆಸರನ್ನು ಆರ್ಎಸ್ಎಸ್ ಸೂಚಿಸಿದೆ. ಈ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದ ಮಹಿಳಾ ಮತದಾರರ ಸೆಳೆಯಲು ಯತ್ನ ಮಾಡಿದೆ ಎನ್ನಲಾಗಿದೆ.
ಜಿಲ್ಲೆಯಲ್ಲಿ ಮೊಗವೀರ ಮಹಿಳೆಗೆ ಸೀಟ್ ಕೊಟ್ಟರೆ ಕಾಪು, ಕುಂದಾಪುರ, ಬೈಂದೂರು ಕ್ಷೇತ್ರದ ಮೊಗವೀರ ಮತಕ್ಕೂ ಬಲೆ ಬೀಸಲು ಸುಲಭವಾಗುತ್ತದೆ ಎಂಬುದು ಬಿಜೆಪಿಯ ಪ್ಲಾನ್. ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಈಗಾಗಲೇ ಐದಾರು ಹೆಸರು ಸಾಲಿನಲ್ಲಿದೆ. ಇದೀಗ ಮೊದಲ ಬಾರಿಗೆ ನಯನ ಗಣೇಶ್ ಹೆಸರು ಕೇಳಿ ಬಂದಿದೆ. ಕಳಂಕ ರಹಿತರನ್ನು ಇಳಿಸಿದ್ರೆ ಸುಲಭವಾಗಿ ಪ್ರಚಾರಕ್ಕೆ ಹೋಗಬಹುದು. ಎದುರಾಳಿಗೆ ದಾಳಿ ಮಾಡಲು ವಿಷಯಗಳೇ ಇರಬಾರದು ಎಂಬುದು ಬಿಜೆಪಿಯ ವಾದ. ತಳಮಟ್ಟದಲ್ಲಿ ನಾವು ಕ್ಯಾಂಪೇನ್ ಮಾಡುತ್ತೇವೆ ಎಂದು ಆರ್ಎಸ್ಎಸ್ ಭರವಸೆ ಕೊಟ್ಟಿದೆ ಎಂಬ ಮಾಹಿತಿಯಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…