ಉಡುಪಿ

ಉಡುಪಿಯಲ್ಲಿ ಪ್ರಮೋದ್ ಸಾಧನೆ ಶೂನ್ಯ : ರಘುಪತಿ ಭಟ್

ಉಡುಪಿ:ಮಾತೆತ್ತಿದರೆ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ೨ ಸಾವಿರ ಕೋಟಿ ರೂ. ಅನುದಾನ ತಂದಿರುವ ಬಗ್ಗೆ ಮಾತನಾಡುವ ನನ್ನ ಎದುರಾಳಿ ಕಾಂಗ್ರೇಸ್ ಅಭ್ಯರ್ಥಿ, ಶಾಸಕ ಪ್ರಮೋದ್ ಮಧ್ವರಾಜ್, ಮೊದಲು ಆ ಕೋಟಿಗಟ್ಟಲೆ ರೂ. ಅನುದಾನ ಎಲ್ಲಿಗೆ ಹೋಗಿದೆ ಮತ್ತು ಅನುದಾನದಲ್ಲಿ ಏನೆಲ್ಲಾ ಸೇರಿದೆ ಎಂಬುದನ್ನು ಜನತೆಗೆ ಸ್ಪಷ್ಟಪಡಿಸಲಿ” ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್, ನಗರದ ಅಂಬಲಪಾಡಿ ಗ್ರಾ. ಪಂ. ವ್ಯಾಪ್ತಿಯ ಕಿದಿಯೂರು – ಪಡುಕೆರೆ ಚುನಾವಣಾ ಪ್ರಚಾರದಲ್ಲಿ ಸವಾಲು ಹಾಕಿದ್ದಾರೆ.

“ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಯೋಜನೆಗೆ ಭೂಸ್ವಾದೀನದ ಪರಿಹಾರ ಮೊತ್ತವೂ ಸೇರಿದಂತೆ ವಿವಿಧ ಯೋಜನೆಗಳ ಅನುದಾನವನ್ನು ಕ್ರೋಡೀಕರಿಸಿ ತನ್ನದಲ್ಲದ ಸಾಧನೆಯನ್ನು ತನ್ನದೇ ಎಂದು ಪ್ರಮೋದ್ ಬಿಂಬಿಸುತ್ತಿರುವುದು ಹಾಸ್ಯಸ್ಪದ. ಅವರ ಅವಧಿಯಲ್ಲಿ ಉಡುಪಿಯ ಕಲ್ಸಂಕ – ಅಂಬಾಗಿಲು ರಸ್ತೆಯ ೧ ಕಿ.ಮೀ. ಹೊರತುಪಡಿಸಿ ಯಾವುದೇ ಪ್ರಮುಖ ರಸ್ತೆಗಳ ಅಗಲೀಕರಣವಾಗಿಲ್ಲ ಆದರೆ ನನ್ನ ಶಾಸಕತ್ವದ ಅವಧಿಯಲ್ಲಿ ನಡೆದ ಆದಿಉಡುಪಿ – ಉಡುಪಿ, ಉಡುಪಿ – ಮಣಿಪಾಲ, ಕಲ್ಸಂಕ – ಅಂಬಾಗಿಲು ರಸ್ತೆ ಅಗಲೀಕರಣ ಹಾಗೂ ಕಾಂಕ್ರೀಟಿಕರಣ ಇಂದಿಗೂ ದಾಖಲೆಯ ಅಭಿವೃದ್ಧಿ ಎನಿಸಿದೆ ” ಎಂದು ಹೇಳಿದರು.

“ಕಳೆದ ಚುನಾವಣೆ ಸಂದರ್ಭದಲ್ಲಿ ೨೦೦ ಬೆಡ್ ಸರಕಾರಿ ಆಸ್ಪತ್ರೆ ನಿರ್ಮಾಣ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರಾದ್ಯಾಂತ ದಿನದ ೨೪ ಗಂಟೆಯೂ ಕುಡಿಯುವ ನೀರು ನೀಡುತ್ತೇನೆ ಎಂದು ಪ್ರಣಾಳಿಕೆಯಲ್ಲಿ ಹೇಳಿ ಗೆದ್ದ ಪ್ರಮೋದ್, ನಗರದ ಹೃದಯ ಭಾಗದ ಅಲಂಕಾರ್ ಟಾಕೀಸ್ ಬಳಿ ಉಡುಪಿ ನಗರದ ಕೊಡುಗೈದಾನಿ ಹಾಜೀ ಅಬ್ದುಲ್ಲಾಸಾಹೇಬರು ದಾನವಾಗಿ ಸರಕಾರಕ್ಕೆ ನೀಡಿದ್ದ ಜಾಗದಲ್ಲಿದ್ದ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸುಮಾರು ೫ ಎಕ್ರೆ ಜಾಗವನ್ನು ಅಬುಧಾಬಿ ಉದ್ಯಮಿ ಬಿ ಆರ್ ಶೆಟ್ಟಿಗೆ ಪ್ರಮೋದ್ ನೀಡಿದ್ದಾರೆ. ಇದರ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ, ಮುಸ್ಲಿಂ ಸಮುದಾಯದವರು ಅದರಲ್ಲೂ ಎಸ್ಡಿಪಿಐ ಪಕ್ಷ ಹಾಗೂ ಉಡುಪಿಯ ನಾಗರಿಕರು ಸೇರಿಕೊಂಡು ಎರಡೇರಡು ಬಾರಿ ಪ್ರತಿಭಟನೆ ನಡೆಸಿದ್ದಾರೆ.ಅಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಸ್ ಡಿಪಿಐ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಮಾತ್ರ ಉಡುಪಿ ಕ್ಷೇತ್ರದಿಂದ ಪ್ರಮೋದ್ ವಿರುದ್ಧ ಯಾವನೇ ಅಭ್ಯರ್ಥಿಯನ್ನು ಕಣಕ್ಕೀಳಿಸದಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ.” ಎಂದರು.

‘ಅದೇ ರೀತಿ ಹಿರಿಯಡ್ಕ ಸಮೀಪದ ಶಿರೂರು ಬಜೆ ಡ್ಯಾಂನಿಂದ ಹಾಗೂ ವಾರಾಹಿ ನದಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ್ಯಾದಂತ ದಿನದ ೨೪ ಗಂಟೆಯೂ ಕುಡಿಯುವ ನೀರು ನೀಡುತ್ತೇನೆಂದು ಹೇಳಿದ ಪ್ರಮೋದ್ ಹಿರಿಯಡ್ಕದ ಬಜೆಯಿಂದ ೧ ಅಡಿ ನೀರು ಮೇಲ್ಕತ್ತಾಗಲಿ, ವಾರಾಹಿಯಿಂದ ನೀರು ತರುವುದಕ್ಕಾಗಲೀ ಸಾಧ್ಯವಾಗಲಿಲ್ಲ, ಒಟ್ಟಾರೆ ಪ್ರಮೋದ್ ಸುಳ್ಳು ಹೇಳಿಯೇ ಕ್ಷೇತ್ರದ ಮತದಾರರನ್ನು ಬಕ್ರಾ ಮಾಡುತ್ತಿದ್ದಾರೆ” ಎಂದು ರಘುಪತಿ ಭಟ್, ಪ್ರಮೋದ್ ವಿರುದ್ಧ ವಾಗ್ದಾಳಿ ನಡೆಸಿದರು.

“ಪ್ರಮೋದ್ ತನ್ನ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿರುವ ಫಲವಾಗಿ ಇಂದು ಕಾರ್ಯಕರ್ತರನ್ನು ಹುಡುಕುವ ಸ್ಥಿತಿ ನಿರ್ಮಾಗೊಂಡಿದೆ. ಬಿಜೆಪಿ ಆಡಳಿತದ ಅವಧಿಯಲ್ಲಿ ಮುಕ್ತವಾಗಿ ದೊರಕುತ್ತಿದ್ದ ಮರಳು ಕ್ರಮೇಣ ಕ್ಷೇತ್ರದ ಜನತೆಯ ಕೈಗೆಟುಕದಂತಾದ ಸಂದರ್ಭದಲ್ಲಿ ಜನಪರ ಹೋರಾಟದ ಮೂಲಕ ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿದ ತೃಪ್ತಿ ಇದೆ ” ಎಂದು ರಘುಪತಿ ಭಟ್ ಹೇಳಿದರು.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

2 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago