Featured

ಉಡುಪಿಯಲ್ಲಿ ಬಿಜೆಪಿ ಹತ್ಯಾ ರಾಜಕಾರಣ ಮಾಡುತ್ತಿದೆ : ಸೊರಕೆ – Vishwanews24

ಉಡುಪಿಯಲ್ಲಿ ಬಿಜೆಪಿ ಹತ್ಯಾ ರಾಜಕಾರಣ ಮಾಡುತ್ತಿದೆ..

ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ…: ಸೊರಕೆ

ಉಡುಪಿ: ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಬಿಜೆಪಿ ಉಡುಪಿಯಲ್ಲಿ ಹತ್ಯಾ ರಾಜಕಾರಣ ಮಾಡುತ್ತಿದೆ. ಜಿಲ್ಲೆಯಲ್ಲಿ ವಿಚ್ಛಿದ್ರಕಾರಿ ದುರ್ಘಟನೆಗಳು ಹೆಚ್ಚಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ ಮರ್ಡರ್ ಪಾಲಿಟಿಕ್ಸ್ ಗೆ ಎಡಮೊಗೆ ಕೊಲೆ ಪ್ರಕರಣ ಇದಕ್ಕೆ ಸಾಕ್ಷಿ. ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ. ಪಂಚಾಯತ್ ನಿಂದ ಆಗುತ್ತಿದ್ದ ತೊಂದರೆಗಳ, ಅಕ್ರಮಗಳ ಬಗ್ಗೆ ಟೀಕಿಸಿದ್ದಕ್ಕೆ ಪಂಚಾಯತ್ ಅಧ್ಯಕ್ಷರೇ ಕೊಲೆ ಮಾಡಿದ್ದಾರೆ. ಈಗಾಗಲೇ ನಾಲ್ಕು ಮಂದಿ ಬಂಧನವಾಗಿದ್ದು, ಇನ್ನಷ್ಟು ಮಂದಿ ಭಾಗಿಯಾದವರಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೇಲೆ ಸಾಕಷ್ಟು ಟೀಕೆ ಕೇಳಿ ಬಂದಿತ್ತು. ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರು ಕೊಲೆಯಾಗುತ್ತಾರೆ ಎಂದು ಹೇಳಲಾಗುತ್ತಿತ್ತು.

ಕಾಂಗ್ರೆಸ್ ಕೊಲೆಗಳಿಗೆ ಬೆಂಬಲ ಕೊಡುತ್ತಾರೆ ಎಂದು ಪ್ರಚಾರ ಮಾಡಿದರು. ಜಿಲ್ಲೆಯಲ್ಲಿ ಮೂರು ಘಟನೆಯನ್ನು ಮೆಲುಕು ಹಾಕಬೇಕು. ಪ್ರವೀಣ್ ಪೂಜಾರಿ ಕೊಲೆ ಪ್ರಕರಣ, ಕೋಟ ಅವಳಿ ಕೊಲೆ ಪ್ರಕರಣ , ಎಡಮೊಗೆ ಕೊಲೆ ಪ್ರಕರಣ. ಕೊಲೆ ಮಾಡಿದ ಎಲ್ಲಾ ಆರೋಪಿಗಳು ಬಿಜೆಪಿಗೆ ಸೇರಿದವರು. ಎಡಮೊಗೆ ಪ್ರಕರಣದಲ್ಲಿ ಬಿಜೆಪಿ ಪಂಚಾಯತ್ ಅಧ್ಯಕ್ಷನೇ ಮೊದಲ ಆರೋಪಿ. ಸಣ್ಣಪುಟ್ಟ ಘಟನೆಯಾದರೂ ಶೋಭಾ ಕರಂದ್ಲಾಜೆ ದೊಡ್ಡದಾಗಿ ಬಿಂಬಿಸುತ್ತಾರೆ. ರಾಜಕೀಯ ಲಾಭ ಪಡೆಯಲು ಹವಣಿಸುತ್ತಾರೆ. ಇಷ್ಟು ಕೊಲೆಗಳಾದಾಗ ಸಂಸದೆ ಶೋಭಾ ಎಲ್ಲಿದ್ದಾರೆ. ಶೋಭಾ- ಬಿ.ವೈ ರಾಘವೇಂದ್ರ ಸಂತ್ರಸ್ತರ ಮನೆಗೆ ಯಾಕೆ ಭೇಟಿ ಕೊಟ್ಟಿಲ್ಲ. ರಾಜಕೀಯ ಹಸ್ತಕ್ಷೇಪವಿಲ್ಲದ ಆರೋಪಿಗಳಿಗೆ ಶಿಕ್ಷೆಯಾಗಲಿ. ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಧ್ಯಕ್ಷ ಪಂಚಾಯತ್ ಕಚೇರಿಯಲ್ಲಿ ಕುಳಿತುಕೊಳ್ಳಬಾರದು. ಕೊಲೆಗೈದ ಆತನನ್ನು ಶಾಶ್ವತವಾಗಿ ಜೈಲಿಗಟ್ಟಬೇಕು ಎಂದು ಸೊರಕೆ ಹೇಳಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago