ಉಡುಪಿ : ನಗರದಲ್ಲಿ ಶುಕ್ರವಾರ ಸಾಯಂಕಾಲ ಕೆಲ ನಿಮಿಷಗಳ ಕಾಲ ಬಿಳಿಬಣ್ಣದ ಬೂದಿ ಮಿಶ್ರಿತ ಮಳೆಯಾಗಿದೆ.
4 ಗಂಟೆ ಸುಮಾರಿಗೆ 5 ನಿಮಿಷಗಳ ಕಾಲ ಕಲ್ಸಂಕ, ಕೆಎಂ ಮಾರ್ಗ, ರಥಬೀದಿ, ಕಡಿಯಾಳಿ, ಮಿಶನ್ ಕಾಂಪೌಂಡ್ ಮೊದಲಾದ ಸ್ಥಳಗಳಲ್ಲಿ ಈ ರೀತಿ ಮಳೆಯಾಗಿದೆ. ಪಟಪಟ ಉದ್ದಿನ ಬೇಳೆಯಂತೆ ಬಿದ್ದ ಈ ಮಳೆಗೆ ಜನರು ಕಕ್ಕಾಬಿಕ್ಕಿಯಾದರು. ದ್ವಿಚಕ್ರ ವಾಹನ, ಕಾರುಗಳ ಮೇಲೆ ಬಿಳಿ ಬಣ್ಣದ ಮಳೆ ಬಿದ್ದು ಕಲೆ ಮೂಡಿಸಿತು. ಉಡುಪಿ ನಗರದಲ್ಲಿ ಮಾತ್ರ ಈ ರೀತಿಯ ಮಳೆಯಾಗಿರುವ ಮಾಹಿತಿ ಇದೆ. ಕೈಗಾರಿಕೆಗಳ ಹಾರುಬೂದಿ ಕಾರಣ ಇರಬಹುದೇ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಭೂಗರ್ಭ ಶಾಸ್ತ್ರಜ್ಞ ಡಾ.ಉದಯಶಂಕರ್, ಇದೇ ರೀತಿ ಕೆಂಪು ಬಣ್ಣದಲ್ಲಿ 10 ದಿನಗಳ ಹಿಂದೆ ಕೆಲವೆಡೆ ತುಂತುರು ಮಳೆ ಸುರಿದಿತ್ತು. ಇದಕ್ಕೆ ನಿಖರ ಕಾರಣ ತಿಳಿಯಲು ಸಾಧ್ಯವಿಲ್ಲ. ಮಳೆ ಆರಂಭವಾಗುವ ಸಮಯದಲ್ಲಿ ಆಮ್ಲೀಯ ಮಳೆ ಬೀಳುವುದು ಸಾಮಾನ್ಯ. ಈಗ ಇಷ್ಟೊಂದು ಮಳೆಯಾದ ಬಳಿಕ ಇಂಥ ಘಟನೆ ಅಚ್ಚರಿ ತಂದಿದೆ ಎಂದು ತಿಳಿಸಿದ್ದಾರೆ. ಉಡುಪಿಯಲ್ಲಿ ಹಾರುಬೂದಿ ಸೂಸುವ ಕೈಗಾರಿಕೆಗಳಾಗಲಿ, ದೊಡ್ಡ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿ ಮಾಡುವಂತ ಕೈಗಾರಿಕೆ ಘಟಕಗಳು ಇಲ್ಲ; ಆದರೂ ಈ ರೀತಿ ಮಳೆಯಾಗಿರುವುದು ವಿಚಿತ್ರವಾಗಿದೆ. ಪ್ರಕೃತಿಯಲ್ಲಿ ಸಂಭವಿಸುವ ಇಂಥ ಕೆಲವು ವಿಚಾರಗಳಿಗೆ ನಮ್ಮಲ್ಲಿ ಉತ್ತರವಿಲ್ಲ ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…