Featured

ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್​​ನಿಂದಾಗಿ ಮನೆಗೆ ಬೆಂಕಿ – 1 ಲಕ್ಷ ನಷ್ಟ

ಉಡುಪಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಕಡಿಯಾಳಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿದೆ. ಮನೆಯ ಭಾಗಶಃ ಹಾನಿಯಾಗಿದ್ದು ಸೊತ್ತುಗಳು ನಷ್ಟವಾಗಿದೆ.

ಮುಕೇಶ್ ರಾವ್ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್​​ ಆಗಿದ್ದು ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಟಿವಿ, ಫ್ಯಾನ್, ಕಪಾಟು, ಹಾರ್ಮೋನಿಯಂ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ದುರ್ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಪಕ್ಕದ ಮನೆಯವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಭಾರೀ ಅವಘಡ ತಪ್ಪಿದೆ.

ಸುಮಾರು 1 ಲಕ್ಷ ರೂಪಾಯಿಯಷ್ಟು ಮೊತ್ತದ ವಸ್ತುಗಳು ನಷ್ಟವಾಗಿದೆ. ಆಟೋ ಡ್ರೈವರ್ ಆಗಿರುವ ಮುಕೇಶ್ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದು, ಪರಿಹಾರ ಮೊತ್ತ ಕೊಡುವಂತೆ ಒತ್ತಾಯಿಸಲಾಗಿದೆ.

ನಾನು 9 ಗಂಟೆಯಷ್ಟು ಹೊತ್ತಿಗೆ ಮನೆಗೆ ಬೀಗ ಹಾಕಿ ಹೋಗಿದ್ದೆ. 9.30ರ ಹೊತ್ತಿಗೆ ಫೋನ್ ಬಂತು. ಕೂಡಲೇ ಬಂದಿದ್ದೇನೆ. ಮನೆಗೆ ಬರುವಷ್ಟರಲ್ಲಿ ಬೆಂಕಿ ಆವರಿಸಿಕೊಂಡಿದ್ದು, 85 ರಿಂದ ಸುಮಾರು ಒಂದು ಲಕ್ಷದವರೆಗೆ ನಷ್ಟವಾಗಿದೆ ಅಂತ ಮುಕೇಶ್ ರಾವ್ ಹೇಳಿದ್ದಾರೆ.

ಸ್ಥಳೀಯ ಮಣೀಂದ್ರ ಮಾತನಾಡಿ, ಬಡತನದ ಕುಟುಂಬದಲ್ಲಿ ಮುಕೇಶ್ ಜೀವನ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳ ಕೂಡಲೇ ಬಂದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಮಳೆ ಹಾನಿಯ ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಹಾರ ಕೊಡಬೇಕಾಗಿದೆ ಎಂದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago