ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕಳೆದ 15 ದಿನಗಳಿಂದ ವರುಣನ ಆರ್ಭಟ ಉಡುಪಿ ಜಿಲ್ಲೆಯಾದ್ಯಂತ ಕೊಂಚ ಕಡಿಮೆಯಾಗಿತ್ತು ಆದರೆ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.
ನಗರದಾದ್ಯಂತ ಮುಂಜಾನೆ ಮಳೆಯಾಗಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಾರ್ಕಳ, ಕುಂದಾಪುರ, ಕಾಪುವಿನಲ್ಲಿ ವಿಪರೀತ ಮಳೆಯಾಗಿದೆ. ಬೈಂದೂರಿನ ಕೆಲವೆಡೆ ಮಳೆಯಾಗಿದ್ದು, ತಗ್ಗು ಪ್ರದೇಶದ ಗದ್ದೆಗಳಿಗೆ ನೀರು ಹರಿದಿದೆ.
ಜಿಲ್ಲೆಯಾದ್ಯಂತ ಕಾರ್ಮೋಡ ಮುಸುಕಿದ ವಾತಾವರಣವಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗಬಹುದು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಾದ ಹೆಬ್ರಿ, ಕೊಲ್ಲೂರು, ಮುಟ್ಲುಪಾಡಿಯಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಳಿಯ ಹೊಸಮಠ ಸೇತುವೆ 3ನೇ ದಿನವೂ ಮುಳುಗಡೆಯಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ, ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟವೂ ಮುಳುಗಡೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸುಳ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿದಿತ್ತು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…