ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕಳೆದ 15 ದಿನಗಳಿಂದ ವರುಣನ ಆರ್ಭಟ ಉಡುಪಿ ಜಿಲ್ಲೆಯಾದ್ಯಂತ ಕೊಂಚ ಕಡಿಮೆಯಾಗಿತ್ತು ಆದರೆ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ.
ನಗರದಾದ್ಯಂತ ಮುಂಜಾನೆ ಮಳೆಯಾಗಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಾರ್ಕಳ, ಕುಂದಾಪುರ, ಕಾಪುವಿನಲ್ಲಿ ವಿಪರೀತ ಮಳೆಯಾಗಿದೆ. ಬೈಂದೂರಿನ ಕೆಲವೆಡೆ ಮಳೆಯಾಗಿದ್ದು, ತಗ್ಗು ಪ್ರದೇಶದ ಗದ್ದೆಗಳಿಗೆ ನೀರು ಹರಿದಿದೆ.
ಜಿಲ್ಲೆಯಾದ್ಯಂತ ಕಾರ್ಮೋಡ ಮುಸುಕಿದ ವಾತಾವರಣವಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗಬಹುದು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಾದ ಹೆಬ್ರಿ, ಕೊಲ್ಲೂರು, ಮುಟ್ಲುಪಾಡಿಯಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ. ಅರಬ್ಬೀ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕೂಡ ಮಳೆಯ ಅಬ್ಬರ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯ ಬಳಿಯ ಹೊಸಮಠ ಸೇತುವೆ 3ನೇ ದಿನವೂ ಮುಳುಗಡೆಯಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆ, ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟವೂ ಮುಳುಗಡೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸುಳ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿದಿತ್ತು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…