Featured

ಉಡುಪಿಯಲ್ಲಿ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ -Vishwanews24

ಉಡುಪಿಯಲ್ಲಿ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ -Vishwanews24

ಉಡುಪಿ : ಆಗಸ್ಟ್ 23 ರಂದು ಉಡುಪಿಯ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ರಾಜ್ಯಮಟ್ಟದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನದ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ರಾಜ್ಯಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಯೋಜಿಸಲಾಗುತ್ತಿದ್ದು, ಕನ್ನಡ ಮತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲೆಯ ಬಿಲ್ಲವ ಸಂಘಟನೆಗಳ ಸಹಯೋಗದಲ್ಲಿ, ಕೋವಿಡ್ ಮಾರ್ಗಸೂಚಿಯನ್ವಯ ಆಗಸ್ಟ್ 23 ರಂದು ಬೆಳಗ್ಗೆ 9.30 ಕ್ಕೆ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ನಾರಾಯಣ ಗುರು ಅವರ ತತ್ವ ಆದರ್ಶಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಕಾರ್ಯಕ್ರಮವನ್ನು ಅತ್ಯಂತ ಆಕರ್ಷಕವಾಗಿ ಆಯೋಜಿಸಲಾಗುವುದು ಎಂದರು.

ಕೋವಿಡ್ ಹರಡುವುದನ್ನು ತಡೆಯಲು ಈಗಾಗಲೇ ಹಲವು ನಿರ್ಭಂಧಗಳಿದ್ದು, ಯಾವುದೇ ಮೆರವಣಿಗೆ ಮಾಡಲು ಅವಕಾಶವಿಲ್ಲ ಆದರೆ ಪೂಜಾ ಕಾರ್ಯಕ್ರಮಗಳನ್ನು ನಡೆಸಲು ಯಾವುದೇ ನಿರ್ಭಂದಗಳಿಲ್ಲವಾಗಿದ್ದು, ನಾರಾಯಣ ಗುರು ಅವರ ಪೂಜಾ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಬಿಲ್ಲವ ಸಂಘಗಳಲ್ಲಿ ಆಚರಿಸಬಹುದಾಗಿದೆ ಆದರೆ ಕೋವಿಡ್ ನಿಯಮ ಪಾಲನೆಯೊಂದಿಗೆ ಜಯಂತಿಯನ್ನು ಆಚರಿಸಬೇಕು ಎಂದು ಜಿ.ಜಗದೀಶ್ ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ , ಜಿಲ್ಲೆಯ ವಿವಿಧ ಬಿಲ್ಲವ ಸಂಘಟನೆಗಳ ಪಧಾಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

8 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

8 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

8 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

24 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

24 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

24 hours ago