ಉಡುಪಿ(vishwanews24) : ವಕೀಲರ ಸಮುದಾಯದಲ್ಲಿ ಚೈತನ್ಯವನ್ನು ಉತ್ಸಾಹ ಹುರುಪು ತುಂಬಿ ಅವರಲ್ಲಿರುವ ಪ್ರತಿಭೆಗೆ ಸೂಕ್ತ ಅವಕಾಶ ಮತ್ತು ವೇದಿಕೆಯನ್ನು ಒದಗಿಸುವ ನಿಟ್ಟಿನಲ್ಲಿ ಉಡುಪಿ ವಕೀಲರ ಸಂಘವು ಕರ್ನಾಟಕ ರಾಜ್ಯದ ವಿವಿಧ ವಕೀಲರ ಸಂಘಗಳ ಸದಸ್ಯರಿಗಾಗಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಕಲಾ ಸಂಭ್ರಮ” ಪೆಬ್ರವರಿ ೧೦ ಮತ್ತು ೧೧ ರಂದು ಉಡುಪಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನಿರ್ಮಿಸಿರುವ ತೆರೆದ ಸಭಾಂಗಣದಲ್ಲಿ ಆಯೋಜಿಸಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನಾಲ್ಡ್ ಪ್ರವೀಣ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ವಿವಿಧ ವಕೀಲರ ಸಂಘಗಳ 20 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಸ್ಪರ್ಧಾಕೂಟದ ಸಮಗ್ರ ವಿಜೇತ ತಂಡಕ್ಕೆ ನಗದು ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು ಅಲ್ಲದೆ ಅತ್ಯುತ್ತಮ ಕಾರ್ಯಕ್ರಮ ನಿರೂಪಣೆ, ವಿಶೇಷ ಪ್ರತಿಭೆ,ಸಮೂಹ ನೃತ್ಯ, ಶಿಸ್ತು ಬದ್ಧ ತಂಡ ಪ್ರದರ್ಶನ,ಸೃಜನಶೀಲ ಪ್ರದರ್ಶನಗಳಿಗೆ ಬಹುಮಾನ ನೀಡಲಾಗುತ್ತದೆ ಎಂದು ವಕೀಲ ಆನಂದ ಮಡಿವಾಳ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕದ ಉಚ್ಚಾ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ನೆರವೇರಿಸಲಿದ್ದು ,ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅಧ್ಯಕ್ಷ ವಹಿಸಲಿದ್ದು ಕರ್ನಾಟಕ ನ್ಯಾಯಮೂರ್ತಿಗಳಾದ ಸಿಎಂ ಜೋಶಿ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು ಟಿ ಖಾದರ್ ಅವರು ಉಡುಪಿ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಸಮಾರೋಪ ಫೆಬ್ರವರಿ 11ರಂದು ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಾ ಶ್ರೀನಿವಾಸ್ ಪೂಜಾರಿ ಸಮರೋಗೋ ಭಾಷಣ ಮಾಡಲಿದ್ದು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಅಧ್ಯಕ್ಷ ವಹಿಸಲಿರುವರು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯರಾಗಿರುವ ಹರೀಶ್ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಬಹುಮಾನ ವಿತರಣಾ ಕಾರ್ಯಕ್ರಮವು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಕೀಲ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಎಆರ್ ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್ ಎಸ್ ಹೆಗ್ಡೆ ಖಜಾಂಚಿ ಗಂಗಾಧರ ಹೆಚ್ ಎಂ ,ವಿವಿಧ ಉಪಸಮಿತಿಗಳ ಸಂಚಾಲಕರಾದ ಬಿ ನಾಗರಾಜ್ ,ರಾಘವೇಂದ್ರ ಶೆಟ್ಟಿ, ಆನಂದ ಮಡಿವಾಳ , ರವೀಂದ್ರ ಬೈಲೂರು ,ಸತೀಶ್ ಪೂಜಾರಿ ಉಪಸ್ಥಿತರಿದ್ದರು..
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…