ಉಡುಪಿ: ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ ನೆಲೆಸಿದೆ. ದೂರದೂರು ಮುಂಬೈಯಿಂದ ಆಗಮಿಸಿದ ಆಲಾರೆ ಗೋವಿಂದ ತಂಡವು ನಗರದ ವಿವಿಧೆಡೆ ಏಳು ಅಡಿಯ ಪಿರಮಿಡ್ ರಚಿಸಿ ಮಡಿಕೆ ಒಡೆದು ಸಂಭ್ರಮಿಸಿತು.
ಮಧುಸೂದನ ಪೂಜಾರಿ ಕೆಮ್ಮುಣ್ಣು ಇವರ ಸಂಯೋಜನೆಯಲ್ಲಿ ಪೂರ್ವ ಮುಂಬೈಯ ಸಾಂತಾಕ್ರೂಸ್ ಬಾಲಮಿತ್ರ ವ್ಯಾಯಾಮ ಶಾಲೆಯ ತಂಡ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆಲಾರೆ ಗೋವಿಂದ ಪ್ರದರ್ಶನ ನಡೆಸಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಆಲಾರೆ ಗೋವಿಂದ ತಂಡ ಪಿರಮಿಡ್ ರಚಿಸಿ ಮಡಿಕೆ ಒಡೆಯುವ ಪ್ರದರ್ಶನ ನೀಡಿತು.
ತಂಡವು ಬರೋಬ್ಬರಿ ಏಳು ಅಂತಸ್ತಿನ ಮಾನವ ಪಿರಮಿಡ್ ರಚಿಸಿತು. ಪುಟಾಣಿ ಮನಸ್ವಿ ಸಂತೋಷ್ ಪಿರಮಿಡ್ನ ತುತ್ತತುದಿಗೇರಿ ಮೊಸರು ಗಡಿಗೆಯನ್ನು ಒಡೆದು ಎಲ್ಲರನ್ನು ರಂಜಿಸಿದ್ದಾಳೆ. ಈ ತಂಡ ವಿಟ್ಲ ಪಿಂಡಿಯ ಪ್ರಯುಕ್ತ ಉಡುಪಿ ಹತ್ತುಕಡೆಗಳಲ್ಲಿ “ಆಲಾರೆ ಗೋವಿಂದ”ವನ್ನು ಪ್ರದರ್ಶಿಸಲಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…