ಉಡುಪಿ: ಉಡುಪಿಯಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ ನೆಲೆಸಿದೆ. ದೂರದೂರು ಮುಂಬೈಯಿಂದ ಆಗಮಿಸಿದ ಆಲಾರೆ ಗೋವಿಂದ ತಂಡವು ನಗರದ ವಿವಿಧೆಡೆ ಏಳು ಅಡಿಯ ಪಿರಮಿಡ್ ರಚಿಸಿ ಮಡಿಕೆ ಒಡೆದು ಸಂಭ್ರಮಿಸಿತು.
ಮಧುಸೂದನ ಪೂಜಾರಿ ಕೆಮ್ಮುಣ್ಣು ಇವರ ಸಂಯೋಜನೆಯಲ್ಲಿ ಪೂರ್ವ ಮುಂಬೈಯ ಸಾಂತಾಕ್ರೂಸ್ ಬಾಲಮಿತ್ರ ವ್ಯಾಯಾಮ ಶಾಲೆಯ ತಂಡ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆಲಾರೆ ಗೋವಿಂದ ಪ್ರದರ್ಶನ ನಡೆಸಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಆಲಾರೆ ಗೋವಿಂದ ತಂಡ ಪಿರಮಿಡ್ ರಚಿಸಿ ಮಡಿಕೆ ಒಡೆಯುವ ಪ್ರದರ್ಶನ ನೀಡಿತು.
ತಂಡವು ಬರೋಬ್ಬರಿ ಏಳು ಅಂತಸ್ತಿನ ಮಾನವ ಪಿರಮಿಡ್ ರಚಿಸಿತು. ಪುಟಾಣಿ ಮನಸ್ವಿ ಸಂತೋಷ್ ಪಿರಮಿಡ್ನ ತುತ್ತತುದಿಗೇರಿ ಮೊಸರು ಗಡಿಗೆಯನ್ನು ಒಡೆದು ಎಲ್ಲರನ್ನು ರಂಜಿಸಿದ್ದಾಳೆ. ಈ ತಂಡ ವಿಟ್ಲ ಪಿಂಡಿಯ ಪ್ರಯುಕ್ತ ಉಡುಪಿ ಹತ್ತುಕಡೆಗಳಲ್ಲಿ “ಆಲಾರೆ ಗೋವಿಂದ”ವನ್ನು ಪ್ರದರ್ಶಿಸಲಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…