Featured

ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಚರ್ಚೆ -Vishwanews24

ಉಡುಪಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಶಾಸಕ ರಘುಪತಿ ಭಟ್  ಅಧಿಕಾರಿಗಳೊಂದಿಗೆ ಚರ್ಚೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಕೇವಲ ಒಂದು ಖಾಸಗಿ ವೈದ್ಯಕೀಯ ಕಾಲೇಜು ಮಾತ್ರ ಇದ್ದು, ಸರಕಾರಿ ವೈದ್ಯಕೀಯ ಕಾಲೇಜಿನ ಬೇಡಿಕೆ ಇರುವುದರಿಂದ ತಕ್ಷಣದಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಯೋಜನೆ ರೂಪಿಸುವ ಬಗ್ಗೆ ಶಾಸಕ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಚರ್ಚಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಇಲಾಖಾಧಿಕಾರಿಗಳ ಜೊತೆ ಚರ್ಚಿಸುವ ಸಂದರ್ಭದಲ್ಲಿ ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆಯ ಕುರಿತು ಅಧಿಕಾರಿಗಳ ಗಮನ ಸೆಳೆದರು.

ಈಗಾಗಲೇ ಉಡುಪಿ ಜಿಲ್ಲಾಸ್ಪತ್ರೆ ಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ದೊರಕಿದೆ. ಸದರಿ ಆಸ್ಪತ್ರೆಯ 10 ಕೀ. ಮೀ. ವ್ಯಾಪ್ತಿಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶದಿಂದ 20 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಸಮಿತಿ ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತಂದರು. ಉಡುಪಿ ಜಿಲ್ಲಾ ಆಸ್ಪತ್ರೆಗೆ ಹೊಂದಿಕೊಂಡಿರುವ ಕಟ್ಟಡದಲ್ಲಿ ಈ ವರ್ಷದಿಂದಲೇ ಬಿಎಸ್ಸಿ ನರ್ಸಿಂಗ್ ಕಾಲೇಜು ಆರಂಭಿಸುವ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಕುಲಸಚಿವರಲ್ಲಿ ಚರ್ಚಿಸಿದರು.

ಭರವಸೆಗಳ ಸಮಿತಿ ಸಭೆಯಲ್ಲಿ ಟಿ. ಕೆ. ಅನಿಲ್ ಕುಮಾರ್, ಪ್ರಧಾನ ಕಾರ್ಯದರ್ಶಿಯವರು, ವೈದ್ಯಕೀಯ ಶಿಕ್ಷಣ ಇಲಾಖೆ, ಎಂ. ಶಿಲ್ಪ, ಜಂಟಿ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ, ಶಿವಾನಂದ ಕಾಪ್ಸಿ ಕುಲಸಚಿವರು, ರಾಜೀವಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ, ಡಾll ರಾಮಲಿಂಗಪ್ಪ ಸಿ. ಎ. ನಿರ್ದೇಶಕರು, ಕಿಮ್ಸ್ ಹುಬ್ಬಳ್ಳಿ, ಡಾll ಶಿವಕುಮಾರ್ ಸಿ. ಆರ್., ನಿರ್ದೇಶಕರು, ಬ್ರಿಮ್ಸ್, ಬೀದರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago