ಉಡುಪಿ: ಜಲಪ್ರಳಯವಾಗಿರುವ ಕೊಡಗು ಸಂಕಷ್ಟದಲ್ಲಿ ಇರುವಾಗ ನಾವು ವಿಜ್ರಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಸರಿಯಲ್ಲ. ಈ ಬಾರಿ ಸರಳವಾಗಿ, ಭಕ್ತಿಯಿಂದ ಅಷ್ಟಮಿ ಆಚರಿಸೋಣ ಅಂತ ಉಡುಪಿಯ ಕೃಷ್ಣ ಮಠದ ಪರ್ಯಾಯ ಪಲಿಮಾರು ಸ್ವಾಮೀಜಿ ಕರೆ ನೀಡಿದ್ದಾರೆ.
ನಗರದಲ್ಲಿ ಅಷ್ಟಮಿ ಸಂದೇಶ ನೀಡಿದ ವಿದ್ಯಾಧೀಶ ಸ್ವಾಮೀಜಿ ನಾವು ಕೊಡಗಿಗಾಗಿ ಭಕ್ತಿಯ ಪ್ರಾರ್ಥನೆ ಮಾಡುತ್ತೇವೆ. ನಷ್ಟವನ್ನೆಲ್ಲ ತುಂಬಿಸು ದೇವಾ ಅಂತ ಪೂಜೆ ಸಲ್ಲಿಸುತ್ತೇವೆ. ಧಾರ್ಮಿಕ ವಿಧಿ ವಿಧಾನಗಳು ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಈ ಬಾರಿ ಸರಳವಾಗಿ ಅಷ್ಟಮಿ ಆಚರಿಸುತ್ತೇವೆ ಎಂದು ಹೇಳಿದರು.
ನೆರೆ, ಭೂ ಕುಸಿತದಿಂದಾಗಿ ತೊಂದರೆಗೀಡಾದವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಮಡಿಕೇರಿಯಲ್ಲಿ ಜನ ಬಹಳ ಸಂಕಷ್ಟದಲ್ಲಿದ್ದಾರೆ. ನಿರಾಶ್ರಿತರಿಗೆ ಕೃಷ್ಣ ಪ್ರಸಾದ ಕಳುಹಿಸಿ ಕೊಡಲಾಗುವುದು. ಕೃಷ್ಣ ಪ್ರಸಾದದ ರೂಪದಲ್ಲಿ ಉಂಡೆ, ಚಕ್ಕುಲಿ, ಹೊಸ ಬಟ್ಟೆ ತಲುಪಿಸುತ್ತೇವೆ ಅಂತ ತಿಳಿಸಿದ್ರು.
ಕಷ್ಟ ಬಂದಲ್ಲಿ ಶ್ರೀ ಕೃಷ್ಣ ಇರುತ್ತಾನಂತೆ. ಪ್ರಕೃತಿ ವಿಕೋಪ ಆದಾಗಲೂ ಕೃಷ್ಣ ರಕ್ಷಣೆ ನೀಡಿದ್ದಾನೆ. ನಮ್ಮ ಕೊಡಗು ಜಿಲ್ಲೆಗೆ ನೋವಾಗಿದೆ. ಹಾನಿಗೊಳಗಾಗಿದೆ. ಅಲ್ಲಿನ ಜನ ಶೀಘ್ರ ಪುನರ್ ಶಕ್ತಿ ಪಡೆದುಕೊಳ್ಳುತ್ತಾರೆ ಅಂದ್ರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…