ಉಡುಪಿ: ಜಲಪ್ರಳಯವಾಗಿರುವ ಕೊಡಗು ಸಂಕಷ್ಟದಲ್ಲಿ ಇರುವಾಗ ನಾವು ವಿಜ್ರಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಸರಿಯಲ್ಲ. ಈ ಬಾರಿ ಸರಳವಾಗಿ, ಭಕ್ತಿಯಿಂದ ಅಷ್ಟಮಿ ಆಚರಿಸೋಣ ಅಂತ ಉಡುಪಿಯ ಕೃಷ್ಣ ಮಠದ ಪರ್ಯಾಯ ಪಲಿಮಾರು ಸ್ವಾಮೀಜಿ ಕರೆ ನೀಡಿದ್ದಾರೆ.
ನಗರದಲ್ಲಿ ಅಷ್ಟಮಿ ಸಂದೇಶ ನೀಡಿದ ವಿದ್ಯಾಧೀಶ ಸ್ವಾಮೀಜಿ ನಾವು ಕೊಡಗಿಗಾಗಿ ಭಕ್ತಿಯ ಪ್ರಾರ್ಥನೆ ಮಾಡುತ್ತೇವೆ. ನಷ್ಟವನ್ನೆಲ್ಲ ತುಂಬಿಸು ದೇವಾ ಅಂತ ಪೂಜೆ ಸಲ್ಲಿಸುತ್ತೇವೆ. ಧಾರ್ಮಿಕ ವಿಧಿ ವಿಧಾನಗಳು ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ಈ ಬಾರಿ ಸರಳವಾಗಿ ಅಷ್ಟಮಿ ಆಚರಿಸುತ್ತೇವೆ ಎಂದು ಹೇಳಿದರು.
ನೆರೆ, ಭೂ ಕುಸಿತದಿಂದಾಗಿ ತೊಂದರೆಗೀಡಾದವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವುದು. ಮಡಿಕೇರಿಯಲ್ಲಿ ಜನ ಬಹಳ ಸಂಕಷ್ಟದಲ್ಲಿದ್ದಾರೆ. ನಿರಾಶ್ರಿತರಿಗೆ ಕೃಷ್ಣ ಪ್ರಸಾದ ಕಳುಹಿಸಿ ಕೊಡಲಾಗುವುದು. ಕೃಷ್ಣ ಪ್ರಸಾದದ ರೂಪದಲ್ಲಿ ಉಂಡೆ, ಚಕ್ಕುಲಿ, ಹೊಸ ಬಟ್ಟೆ ತಲುಪಿಸುತ್ತೇವೆ ಅಂತ ತಿಳಿಸಿದ್ರು.
ಕಷ್ಟ ಬಂದಲ್ಲಿ ಶ್ರೀ ಕೃಷ್ಣ ಇರುತ್ತಾನಂತೆ. ಪ್ರಕೃತಿ ವಿಕೋಪ ಆದಾಗಲೂ ಕೃಷ್ಣ ರಕ್ಷಣೆ ನೀಡಿದ್ದಾನೆ. ನಮ್ಮ ಕೊಡಗು ಜಿಲ್ಲೆಗೆ ನೋವಾಗಿದೆ. ಹಾನಿಗೊಳಗಾಗಿದೆ. ಅಲ್ಲಿನ ಜನ ಶೀಘ್ರ ಪುನರ್ ಶಕ್ತಿ ಪಡೆದುಕೊಳ್ಳುತ್ತಾರೆ ಅಂದ್ರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…