Featured

ಉಡುಪಿಯಲ್ಲಿ ಸ್ವಪಕ್ಷದಿಂದಲೇ ಸಚಿವೆ ಜಯಮಾಲಾ ಗೆ ತೀವ್ರ ಮುಖಭಂಗ ;ಕಾರ್ಯಕರ್ತರ ವಿರುದ್ಧವೇ ಗರಂ..

ಉಡುಪಿ: ಜಯಮಾಲಾಗೆ ಸ್ವಪಕ್ಷೀಯರಿಂದಲೇ ಇರಿಸು ಮುರಿಸಾದ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 150ನೇ ವರ್ಷದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ನಡೆದಿದೆ.

ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ಸಚಿವೆ ಜಯಮಾಲಾಗೆ ಕಾಂಗ್ರೆಸ್ ಕಚೇರಿಯಲ್ಲಿ ಮುತ್ತಿಗೆ ಹಾಕಿದ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಭಾರತ್ ಬಂದ್ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭಾರತ್ ಬಂದ್ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಗಿದ್ದ ಲಾಠಿಚಾರ್ಜ್ ಬಗ್ಗೆ ಸಚಿವೆ ಜಯಾಮಾಲ ಪ್ರಶ್ನಿಸದೇ ಇರುವುದನ್ನು ತರಾಟಕ್ಕೆ ತೆಗೆದುಕೊಂಡ ಕಾರ್ಯಕರ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅದಲ್ಲದೆ ಹಿಗ್ಗಾ ಮುಗ್ಗ ಥಳಿಸಿದ ಎಸ್. ಪಿ ಮನೆಗೆ ಗಣಪತಿ ಹಬ್ಬದಂದು ಜಯಾಮಾಲ ಭೇಟಿ ನೀಡಿದನ್ನು ಪ್ರಶ್ನಿಸಿ ಅಕ್ರೋಶವನ್ನು ಹೊರ ಹಾಕಿದರು. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎತ್ತಂಗಡಿಗೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸೂಕ್ತ ನಡವಳಿಕೆ ತೆಗೆದುಕೊಳ್ಳಬೇಕೆಂದು ಸಚಿವೆ ಯಲ್ಲಿ ಮನವಿ ಮಾಡಿದರು. .

ಭಾರತ್ ಬಂದ್ ಸಂದರ್ಭ ನಡೆದ ಗಲಾಟೆಯಲ್ಲಿ ಸ್ವತಃ ಪೊಲೀಸ್ ವರಿಷ್ಠಾಧಿಕಾರಿಯೇ ಕಾಂಗ್ರೇಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ಜಿಲ್ಲೆಯ ಉಸ್ತುವಾರಿ ಸಚಿವೆ ಆಗಿರುವ ಜಯಮಾಲಾ ಲಾಠಿಚಾರ್ಜ್ ಆದಾಗ ಕಾಂಗ್ರೆಸ್ ಕಾರ್ಯಕರ್ತರ ಕಷ್ಟಗಳಿಗೆ, ನೋವುಗಳಿಗೆ ಯಾವುದೇ ರೀತಿಯಲ್ಲಿ ಸ್ವಂದಿಸಿಲ್ಲ. ಕಾರ್ಯಕರ್ತರು ಆಸ್ಪತ್ರೆ ಗೆ ದಾಖಲಾದರೂ ಅವರ ಆರೋಗ್ಯ ವಿಚಾರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಕಷ್ಟಗಳಿಗೆ ಸ್ಪಂದಿಸದ ನೀವು ಗಣೇಶ ಹಬ್ಬದಂದು ಎಸ್ ಪಿ ಮನೆಗೆ ಊಟ ಮಾಡಲು ಹೋಗಿದ್ದಿರಿ ಎಂದು ಜಯಮಾಲ ವಿರುದ್ದ ಕಾರ್ಯಕರ್ತರು ಆರೋಪಗಳ ಸುರಿಮಳೆಗೈದರು. ಸ್ವಪಕ್ಷೀಯರಿಂದಲೇ ಘೇರಾವ್ ಹಾಕಿಸಿಕೊಂಡ ಸಚಿವೆ ಜಯಮಾಲಗ ತೀವ್ರ ಮುಜುಗರಕ್ಕೆ ಒಳಗಾಗಿ ಕಾರ್ಯಕರ್ತರ ಆಕ್ರೋಶಕ್ಕೆ ಸಮಜಾಯಿಷಿ ನೀಡಲು ಮುಂದಾದರು. ಆದರೆ ಸಚಿವೆಯ ಮಾತಿಗೆ ತಣ್ಣಗಾಗದೆ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದರು.

ಸಚಿವೆ ಜಯಮಾಲಾರಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಚಿವೆ ಖಡಕ್ ಸೂಚನೆ ನೀಡಿ ಕಾಲ್ಕಿತ್ತರು. ಈ ವೇಳೆ ಜಯಮಾಲಾ ಅವರು ಮಾಧ್ಯಮ ಮುಂದಿಟ್ಟುಕೊಂಡು ಹೆದರಿಸಲು ಬರಬೇಡಿ ಎಂದು ಎಚ್ಚರಿಕೆ ನೀಡಿದರು. ನನಗೆ ತುಂಬಾ ಕೋಪ ಬರುತ್ತೆ ಎಂದು ಕಾರು ಹತ್ತಿ ಸಚಿವೆ ಕಾಲ್ಕಿತ್ತರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago