ಉಡುಪಿ: ಜಯಮಾಲಾಗೆ ಸ್ವಪಕ್ಷೀಯರಿಂದಲೇ ಇರಿಸು ಮುರಿಸಾದ ಘಟನೆ ಮಂಗಳವಾರ ಮಧ್ಯಾಹ್ನ ವೇಳೆ ಉಡುಪಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 150ನೇ ವರ್ಷದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ನಡೆದಿದೆ.
ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ಸಚಿವೆ ಜಯಮಾಲಾಗೆ ಕಾಂಗ್ರೆಸ್ ಕಚೇರಿಯಲ್ಲಿ ಮುತ್ತಿಗೆ ಹಾಕಿದ ಕಾರ್ಯಕರ್ತರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಭಾರತ್ ಬಂದ್ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಭಾರತ್ ಬಂದ್ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಗಿದ್ದ ಲಾಠಿಚಾರ್ಜ್ ಬಗ್ಗೆ ಸಚಿವೆ ಜಯಾಮಾಲ ಪ್ರಶ್ನಿಸದೇ ಇರುವುದನ್ನು ತರಾಟಕ್ಕೆ ತೆಗೆದುಕೊಂಡ ಕಾರ್ಯಕರ್ತರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅದಲ್ಲದೆ ಹಿಗ್ಗಾ ಮುಗ್ಗ ಥಳಿಸಿದ ಎಸ್. ಪಿ ಮನೆಗೆ ಗಣಪತಿ ಹಬ್ಬದಂದು ಜಯಾಮಾಲ ಭೇಟಿ ನೀಡಿದನ್ನು ಪ್ರಶ್ನಿಸಿ ಅಕ್ರೋಶವನ್ನು ಹೊರ ಹಾಕಿದರು. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಎತ್ತಂಗಡಿಗೆ ಒತ್ತಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸೂಕ್ತ ನಡವಳಿಕೆ ತೆಗೆದುಕೊಳ್ಳಬೇಕೆಂದು ಸಚಿವೆ ಯಲ್ಲಿ ಮನವಿ ಮಾಡಿದರು. .
ಭಾರತ್ ಬಂದ್ ಸಂದರ್ಭ ನಡೆದ ಗಲಾಟೆಯಲ್ಲಿ ಸ್ವತಃ ಪೊಲೀಸ್ ವರಿಷ್ಠಾಧಿಕಾರಿಯೇ ಕಾಂಗ್ರೇಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು. ಜಿಲ್ಲೆಯ ಉಸ್ತುವಾರಿ ಸಚಿವೆ ಆಗಿರುವ ಜಯಮಾಲಾ ಲಾಠಿಚಾರ್ಜ್ ಆದಾಗ ಕಾಂಗ್ರೆಸ್ ಕಾರ್ಯಕರ್ತರ ಕಷ್ಟಗಳಿಗೆ, ನೋವುಗಳಿಗೆ ಯಾವುದೇ ರೀತಿಯಲ್ಲಿ ಸ್ವಂದಿಸಿಲ್ಲ. ಕಾರ್ಯಕರ್ತರು ಆಸ್ಪತ್ರೆ ಗೆ ದಾಖಲಾದರೂ ಅವರ ಆರೋಗ್ಯ ವಿಚಾರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಕಷ್ಟಗಳಿಗೆ ಸ್ಪಂದಿಸದ ನೀವು ಗಣೇಶ ಹಬ್ಬದಂದು ಎಸ್ ಪಿ ಮನೆಗೆ ಊಟ ಮಾಡಲು ಹೋಗಿದ್ದಿರಿ ಎಂದು ಜಯಮಾಲ ವಿರುದ್ದ ಕಾರ್ಯಕರ್ತರು ಆರೋಪಗಳ ಸುರಿಮಳೆಗೈದರು. ಸ್ವಪಕ್ಷೀಯರಿಂದಲೇ ಘೇರಾವ್ ಹಾಕಿಸಿಕೊಂಡ ಸಚಿವೆ ಜಯಮಾಲಗ ತೀವ್ರ ಮುಜುಗರಕ್ಕೆ ಒಳಗಾಗಿ ಕಾರ್ಯಕರ್ತರ ಆಕ್ರೋಶಕ್ಕೆ ಸಮಜಾಯಿಷಿ ನೀಡಲು ಮುಂದಾದರು. ಆದರೆ ಸಚಿವೆಯ ಮಾತಿಗೆ ತಣ್ಣಗಾಗದೆ ಕಾರ್ಯಕರ್ತರು ವಾಗ್ವಾದ ಮುಂದುವರಿಸಿದರು.
ಸಚಿವೆ ಜಯಮಾಲಾರಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಚಿವೆ ಖಡಕ್ ಸೂಚನೆ ನೀಡಿ ಕಾಲ್ಕಿತ್ತರು. ಈ ವೇಳೆ ಜಯಮಾಲಾ ಅವರು ಮಾಧ್ಯಮ ಮುಂದಿಟ್ಟುಕೊಂಡು ಹೆದರಿಸಲು ಬರಬೇಡಿ ಎಂದು ಎಚ್ಚರಿಕೆ ನೀಡಿದರು. ನನಗೆ ತುಂಬಾ ಕೋಪ ಬರುತ್ತೆ ಎಂದು ಕಾರು ಹತ್ತಿ ಸಚಿವೆ ಕಾಲ್ಕಿತ್ತರು.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…