ಉಡುಪಿ : ಬಾಲಕಿಯೊಬ್ಬಳು ಧಿಡೀರ್ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸುಶ್ಮಿತ ನಾಪತ್ತೆಯಾದ ಬಾಲಕಿ. ಮೂಲತಃ ಕೊಪ್ಪಳ ಜಿಲ್ಲೆ ಪುಷ್ಟಗಿ ತಾಲೂಕಿನ ನಿವಾಸಿಯಾದ ಈಕೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಟಿಎಂಎಪೈ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಯನ್ನು ಆಕೆ ತಾಯಿ ಲಕ್ಷ್ಮಿ ಕಲ್ಯಾಣಪುರದಲ್ಲಿರುವ ಪ್ಲಾನೆಟ್ ಮಾರ್ಸ್ ಫೌಂಡೇಶನ್ ಎಂಬ ಆಶ್ರಮದಲ್ಲಿ ಸೇರಿಸಿ ಹೋಗಿದ್ದರು.
ಎಂದಿನಂತೆ ಶಾಲೆಗೆ ಹೋಗಿ ಆಶ್ರಮಕ್ಕೆ ಬರುತ್ತಿದ್ದ ಸುಶ್ಮಿತ ಎಂಬಾಕೆ ಇದೇ ಜೂನ್19ರಂದು ರಾತ್ರಿ ಊಟ ಮಾಡಿ ಮಲಗಿದ್ದವಳು ಮರುದಿನ ಬೆಳಿಗ್ಗೆ ಕಾಣೆಯಾಗಿದ್ದಾಳೆ.
ಪೋಷಕರು ಆಶ್ರಮದ ಮೇಲೆಯೇ ಶಂಕೆ ವ್ಯಕ್ತಪಡಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಆದರೆ ಆಶ್ರಮದ ಮುಖ್ಯಸ್ಥರು ಮಾತ್ರ ಆಕೆ ಯಾರಿಗೂ ತಿಳಿಯದೆ ರಾತ್ರೋ ರಾತ್ರಿ ಆಶ್ರಮ ಬಿಟ್ಟು ಹೋಗಿದ್ದಾಳೆ. ಈ ಬಗ್ಗೆ ಆಕೆ ಆಶ್ರಮದಿಂದ ಒಬ್ಬಳೇ ಹೊರಗೆ ಹೋಗಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮಲ್ಪೆ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ಇಷ್ಟೇ ಅಲ್ಲದೆ ಬಾಲಕಿಯನ್ನು ಯಾರಾದರೂ ಅಪಹರಿಸಿದ್ದಾರಾ ಎಂಬ ಶಂಕೆಯೂ ಪೋಷಕರಿಂದ ವ್ಯಕ್ತವಾಗಿದೆ. ಈ ನಿಟ್ಟಿನಲ್ಲೂ ತನಿಖೆ ಮುಂದುವರೆದಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…