Featured

ಉಡುಪಿಯಲ್ಲಿ 2020ಕ್ಕೆ ಸ್ಯಾಂಡ್‌ ಬಜಾರ್‌ ಆ್ಯಪ್‌ : ಆನ್‌ಲೈನ್‌ ಮೂಲಕ ಮರಳು ಪೂರೈಕೆ -Vishwanews24

ಉಡುಪಿ: ಜಿಲ್ಲೆಯಲ್ಲಿಇಲ್ಲಿಯವರೆಗೆ 10 ಸಾವಿರ ಮೆ. ಟನ್‌ಗಳಷ್ಟು ಮರಳು ಒದಗಿಸಲಾಗಿದೆ. ಪರವಾನಿಗೆ ನೀಡುವ ಕೆಲಸ ನಡೆಯುತ್ತಿದ್ದು, 170 ಮಂದಿ ಪರವಾನಿಗೆದಾರರಲ್ಲಿ 158 ಮಂದಿ ಅರ್ಹರು ಎಂದು ಗುರುತಿಸಲಾಗಿದೆ. 120 ಮಂದಿಗೆ ಪರವಾನಿಗೆ ನೀಡಲಾಗಿದೆ. ರಜೆ ಇದ್ದ ಕಾರಣ ಎರಡು ದಿನಗಳಿಂದ ಈ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮರಳು ಸಾಗಾಟದ ಎಲ್ಲ ಲಾರಿಗಳಿಗೆ ಜಿಪಿಎಸ್‌ ಅಳವಡಿಸಲಾಗಿದ್ದು, ಜಿಲ್ಲೆಯಿಂದ ಮರಳು ಹೊರಗೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಉಲ್ಲಂ ಸಿದರೆ ಪ್ರಕರಣ ಪರವಾನಗಿದಾರರಿಗೆ 28 ಷರತ್ತು ವಿಧಿಸಲಾಗಿದೆ. ಯಾವುದೇ ಅಂಶ ಉಲ್ಲಂಘನೆಯಾದರೂ ದಂಡ ತಪ್ಪಿದ್ದಲ್ಲ. ಮರಳು ದಿಬ್ಬ ತೆರವಿಗೆ 170ಕ್ಕಿಂತ ಹೆಚ್ಚು ಪರವಾನಗಿ ನೀಡದಿರಲು ಜಿಲ್ಲೆಯ ಏಳು ಸದಸ್ಯರ ಸಮಿತಿ ನಿರ್ಧರಿಸಿದೆ. 2011ಕ್ಕಿಂತ ಮೊದಲು ಸಾಂಪ್ರದಾಯಿಕ ಮರಳು ದಿಬ್ಬ ತೆರವು ಮಾಡುತ್ತಿದ್ದ 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣವಿದೆ.

ಈಗಾಗಲೇ 7.96 ಲಕ್ಷ ಮೆ. ಟನ್‌ಗಳಷ್ಟು ಮರಳು ತೆರವಿಗೆ ಆದೇಶ ಬಂದಿದ್ದು, ಈ ಪ್ರಕ್ರಿಯೆ ಡಿಸೆಂಬರ್‌ ಅಂತ್ಯದವರೆಗೂ ನಡೆಯಲಿದೆ. ಅನಂತರ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಸಾರ್ವಜನಿಕರು ಸಮೀಪದಿಂದಲೇ ಮರಳು ಪಡೆಯಬಹುದು. ಆನ್‌ಲೈನ್‌ನಲ್ಲಿ ಮರಳಿನ ದರ ತಿಳಿದು ಹಣವನ್ನೂ ಅಲ್ಲಿಯೇ ಪಾವತಿಸಿದರೆ ಮನೆ ಬಾಗಿಲಿಗೆ ಮರಳು ತಲುಪಲಿದೆ. ಇದಕ್ಕಾಗಿ ಪ್ರತ್ಯೇಕ ವಾಹನ ಬಾಡಿಗೆ ಪಾವತಿಸುವ ಅಗತ್ಯವಿಲ್ಲ. ಮರಳು ಬುಕ್‌ ಮಾಡಿದ ಅನಂತರ ಮರಳು ಲೋಡ್‌ ಆದಲ್ಲಿಂದ ಪ್ರತೀ ಮಾಹಿತಿ ಗ್ರಾಹಕರ ಮೊಬೈಲಿಗೆ ಬರಲಿದೆ. ಅತ್ಯಂತ ಪಾರದರ್ಶಕವಾಗಿ ಮರಳು ವಿತರಣೆ ಪ್ರಕ್ರಿಯೆ ನಡೆಯಲಿದೆ. ಮರಳು ಗುತ್ತಿಗೆದಾರರ ಮತ್ತು ಮರಳು ಸಾಗಾಟ ಮಾಡುವ ವಾಹನಗಳ ನೋಂದಣಿ ಕೂಡ ಆ್ಯಪ್‌ನಲ್ಲಿ ನಡೆಯಲಿದೆ.

ಮರಳು ಸಾಗಿಸುವ 600 ಲಾರಿಗಳಿಗೆ ಜಿಪಿಎಸ್‌, ಮರಳು ಧಕ್ಕೆಗೆ ಜಿಪಿಎಸ್‌ ಸಹಿತ ಜಿಯೋ ಫೆನ್ಸಿಂಗ್‌ ಅಳವಡಿಸಲಾಗಿದೆ. 10 ಟನ್‌ ಮರಳಿಗೆ 5,500 ರೂ. ದರ ನಿಗದಿಪಡಿಸಿದ್ದು, ಪ್ರತಿ ಟನ್‌ ಮರಳು ಸಾಗಾಟಕ್ಕೆ 96 ರೂ. ರಾಜಧನ ಪಾವತಿಸಬೇಕು. 20 ಕಿ.ಮೀ. ವ್ಯಾಪ್ತಿಯೊಳಗೆ ಸಣ್ಣ ವಾಹನದ ಮೂಲಕ ಮರಳು ಸಾಗಾಟಕ್ಕೆ 1,500 ರೂ., ಬಳಿಕದ ಪ್ರತಿ ಕಿ.ಮೀ.ಗೆ 35 ರೂ. ಸಾಗಣೆ ವೆಚ್ಚ ನಿಗದಿಯಾಗಿದೆ. 20 ಕಿ. ಮೀ. ಒಳಗೆ ದೊಡ್ಡ ವಾಹನದಲ್ಲಿ ಮರಳು ಸಾಗಿಸಲು 2,500 ರೂ. ಮತ್ತು ಹೆಚ್ಚುವರಿ ಪ್ರತಿ ಕಿ.ಮೀ.ಗೆ 50 ರೂ.ನಂತೆ ದರ ವಸೂಲಿ ಮಾಡಲಾಗುತ್ತಿದೆ.

 

Vishwa News 24

Recent Posts

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

5 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

15 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

28 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

36 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

40 minutes ago

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

51 minutes ago