Featured

ಉಡುಪಿಯಲ್ಲಿ 2020ಕ್ಕೆ ಸ್ಯಾಂಡ್‌ ಬಜಾರ್‌ ಆ್ಯಪ್‌ : ಆನ್‌ಲೈನ್‌ ಮೂಲಕ ಮರಳು ಪೂರೈಕೆ -Vishwanews24

ಉಡುಪಿ: ಜಿಲ್ಲೆಯಲ್ಲಿಇಲ್ಲಿಯವರೆಗೆ 10 ಸಾವಿರ ಮೆ. ಟನ್‌ಗಳಷ್ಟು ಮರಳು ಒದಗಿಸಲಾಗಿದೆ. ಪರವಾನಿಗೆ ನೀಡುವ ಕೆಲಸ ನಡೆಯುತ್ತಿದ್ದು, 170 ಮಂದಿ ಪರವಾನಿಗೆದಾರರಲ್ಲಿ 158 ಮಂದಿ ಅರ್ಹರು ಎಂದು ಗುರುತಿಸಲಾಗಿದೆ. 120 ಮಂದಿಗೆ ಪರವಾನಿಗೆ ನೀಡಲಾಗಿದೆ. ರಜೆ ಇದ್ದ ಕಾರಣ ಎರಡು ದಿನಗಳಿಂದ ಈ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮರಳು ಸಾಗಾಟದ ಎಲ್ಲ ಲಾರಿಗಳಿಗೆ ಜಿಪಿಎಸ್‌ ಅಳವಡಿಸಲಾಗಿದ್ದು, ಜಿಲ್ಲೆಯಿಂದ ಮರಳು ಹೊರಗೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಉಲ್ಲಂ ಸಿದರೆ ಪ್ರಕರಣ ಪರವಾನಗಿದಾರರಿಗೆ 28 ಷರತ್ತು ವಿಧಿಸಲಾಗಿದೆ. ಯಾವುದೇ ಅಂಶ ಉಲ್ಲಂಘನೆಯಾದರೂ ದಂಡ ತಪ್ಪಿದ್ದಲ್ಲ. ಮರಳು ದಿಬ್ಬ ತೆರವಿಗೆ 170ಕ್ಕಿಂತ ಹೆಚ್ಚು ಪರವಾನಗಿ ನೀಡದಿರಲು ಜಿಲ್ಲೆಯ ಏಳು ಸದಸ್ಯರ ಸಮಿತಿ ನಿರ್ಧರಿಸಿದೆ. 2011ಕ್ಕಿಂತ ಮೊದಲು ಸಾಂಪ್ರದಾಯಿಕ ಮರಳು ದಿಬ್ಬ ತೆರವು ಮಾಡುತ್ತಿದ್ದ 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣವಿದೆ.

ಈಗಾಗಲೇ 7.96 ಲಕ್ಷ ಮೆ. ಟನ್‌ಗಳಷ್ಟು ಮರಳು ತೆರವಿಗೆ ಆದೇಶ ಬಂದಿದ್ದು, ಈ ಪ್ರಕ್ರಿಯೆ ಡಿಸೆಂಬರ್‌ ಅಂತ್ಯದವರೆಗೂ ನಡೆಯಲಿದೆ. ಅನಂತರ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಸಾರ್ವಜನಿಕರು ಸಮೀಪದಿಂದಲೇ ಮರಳು ಪಡೆಯಬಹುದು. ಆನ್‌ಲೈನ್‌ನಲ್ಲಿ ಮರಳಿನ ದರ ತಿಳಿದು ಹಣವನ್ನೂ ಅಲ್ಲಿಯೇ ಪಾವತಿಸಿದರೆ ಮನೆ ಬಾಗಿಲಿಗೆ ಮರಳು ತಲುಪಲಿದೆ. ಇದಕ್ಕಾಗಿ ಪ್ರತ್ಯೇಕ ವಾಹನ ಬಾಡಿಗೆ ಪಾವತಿಸುವ ಅಗತ್ಯವಿಲ್ಲ. ಮರಳು ಬುಕ್‌ ಮಾಡಿದ ಅನಂತರ ಮರಳು ಲೋಡ್‌ ಆದಲ್ಲಿಂದ ಪ್ರತೀ ಮಾಹಿತಿ ಗ್ರಾಹಕರ ಮೊಬೈಲಿಗೆ ಬರಲಿದೆ. ಅತ್ಯಂತ ಪಾರದರ್ಶಕವಾಗಿ ಮರಳು ವಿತರಣೆ ಪ್ರಕ್ರಿಯೆ ನಡೆಯಲಿದೆ. ಮರಳು ಗುತ್ತಿಗೆದಾರರ ಮತ್ತು ಮರಳು ಸಾಗಾಟ ಮಾಡುವ ವಾಹನಗಳ ನೋಂದಣಿ ಕೂಡ ಆ್ಯಪ್‌ನಲ್ಲಿ ನಡೆಯಲಿದೆ.

ಮರಳು ಸಾಗಿಸುವ 600 ಲಾರಿಗಳಿಗೆ ಜಿಪಿಎಸ್‌, ಮರಳು ಧಕ್ಕೆಗೆ ಜಿಪಿಎಸ್‌ ಸಹಿತ ಜಿಯೋ ಫೆನ್ಸಿಂಗ್‌ ಅಳವಡಿಸಲಾಗಿದೆ. 10 ಟನ್‌ ಮರಳಿಗೆ 5,500 ರೂ. ದರ ನಿಗದಿಪಡಿಸಿದ್ದು, ಪ್ರತಿ ಟನ್‌ ಮರಳು ಸಾಗಾಟಕ್ಕೆ 96 ರೂ. ರಾಜಧನ ಪಾವತಿಸಬೇಕು. 20 ಕಿ.ಮೀ. ವ್ಯಾಪ್ತಿಯೊಳಗೆ ಸಣ್ಣ ವಾಹನದ ಮೂಲಕ ಮರಳು ಸಾಗಾಟಕ್ಕೆ 1,500 ರೂ., ಬಳಿಕದ ಪ್ರತಿ ಕಿ.ಮೀ.ಗೆ 35 ರೂ. ಸಾಗಣೆ ವೆಚ್ಚ ನಿಗದಿಯಾಗಿದೆ. 20 ಕಿ. ಮೀ. ಒಳಗೆ ದೊಡ್ಡ ವಾಹನದಲ್ಲಿ ಮರಳು ಸಾಗಿಸಲು 2,500 ರೂ. ಮತ್ತು ಹೆಚ್ಚುವರಿ ಪ್ರತಿ ಕಿ.ಮೀ.ಗೆ 50 ರೂ.ನಂತೆ ದರ ವಸೂಲಿ ಮಾಡಲಾಗುತ್ತಿದೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago