Featured

ಉಡುಪಿಯಲ್ಲಿ 2020ಕ್ಕೆ ಸ್ಯಾಂಡ್‌ ಬಜಾರ್‌ ಆ್ಯಪ್‌ : ಆನ್‌ಲೈನ್‌ ಮೂಲಕ ಮರಳು ಪೂರೈಕೆ -Vishwanews24

ಉಡುಪಿ: ಜಿಲ್ಲೆಯಲ್ಲಿಇಲ್ಲಿಯವರೆಗೆ 10 ಸಾವಿರ ಮೆ. ಟನ್‌ಗಳಷ್ಟು ಮರಳು ಒದಗಿಸಲಾಗಿದೆ. ಪರವಾನಿಗೆ ನೀಡುವ ಕೆಲಸ ನಡೆಯುತ್ತಿದ್ದು, 170 ಮಂದಿ ಪರವಾನಿಗೆದಾರರಲ್ಲಿ 158 ಮಂದಿ ಅರ್ಹರು ಎಂದು ಗುರುತಿಸಲಾಗಿದೆ. 120 ಮಂದಿಗೆ ಪರವಾನಿಗೆ ನೀಡಲಾಗಿದೆ. ರಜೆ ಇದ್ದ ಕಾರಣ ಎರಡು ದಿನಗಳಿಂದ ಈ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ಮರಳು ಸಾಗಾಟದ ಎಲ್ಲ ಲಾರಿಗಳಿಗೆ ಜಿಪಿಎಸ್‌ ಅಳವಡಿಸಲಾಗಿದ್ದು, ಜಿಲ್ಲೆಯಿಂದ ಮರಳು ಹೊರಗೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಉಲ್ಲಂ ಸಿದರೆ ಪ್ರಕರಣ ಪರವಾನಗಿದಾರರಿಗೆ 28 ಷರತ್ತು ವಿಧಿಸಲಾಗಿದೆ. ಯಾವುದೇ ಅಂಶ ಉಲ್ಲಂಘನೆಯಾದರೂ ದಂಡ ತಪ್ಪಿದ್ದಲ್ಲ. ಮರಳು ದಿಬ್ಬ ತೆರವಿಗೆ 170ಕ್ಕಿಂತ ಹೆಚ್ಚು ಪರವಾನಗಿ ನೀಡದಿರಲು ಜಿಲ್ಲೆಯ ಏಳು ಸದಸ್ಯರ ಸಮಿತಿ ನಿರ್ಧರಿಸಿದೆ. 2011ಕ್ಕಿಂತ ಮೊದಲು ಸಾಂಪ್ರದಾಯಿಕ ಮರಳು ದಿಬ್ಬ ತೆರವು ಮಾಡುತ್ತಿದ್ದ 12 ಮಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣವಿದೆ.

ಈಗಾಗಲೇ 7.96 ಲಕ್ಷ ಮೆ. ಟನ್‌ಗಳಷ್ಟು ಮರಳು ತೆರವಿಗೆ ಆದೇಶ ಬಂದಿದ್ದು, ಈ ಪ್ರಕ್ರಿಯೆ ಡಿಸೆಂಬರ್‌ ಅಂತ್ಯದವರೆಗೂ ನಡೆಯಲಿದೆ. ಅನಂತರ ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಸಾರ್ವಜನಿಕರು ಸಮೀಪದಿಂದಲೇ ಮರಳು ಪಡೆಯಬಹುದು. ಆನ್‌ಲೈನ್‌ನಲ್ಲಿ ಮರಳಿನ ದರ ತಿಳಿದು ಹಣವನ್ನೂ ಅಲ್ಲಿಯೇ ಪಾವತಿಸಿದರೆ ಮನೆ ಬಾಗಿಲಿಗೆ ಮರಳು ತಲುಪಲಿದೆ. ಇದಕ್ಕಾಗಿ ಪ್ರತ್ಯೇಕ ವಾಹನ ಬಾಡಿಗೆ ಪಾವತಿಸುವ ಅಗತ್ಯವಿಲ್ಲ. ಮರಳು ಬುಕ್‌ ಮಾಡಿದ ಅನಂತರ ಮರಳು ಲೋಡ್‌ ಆದಲ್ಲಿಂದ ಪ್ರತೀ ಮಾಹಿತಿ ಗ್ರಾಹಕರ ಮೊಬೈಲಿಗೆ ಬರಲಿದೆ. ಅತ್ಯಂತ ಪಾರದರ್ಶಕವಾಗಿ ಮರಳು ವಿತರಣೆ ಪ್ರಕ್ರಿಯೆ ನಡೆಯಲಿದೆ. ಮರಳು ಗುತ್ತಿಗೆದಾರರ ಮತ್ತು ಮರಳು ಸಾಗಾಟ ಮಾಡುವ ವಾಹನಗಳ ನೋಂದಣಿ ಕೂಡ ಆ್ಯಪ್‌ನಲ್ಲಿ ನಡೆಯಲಿದೆ.

ಮರಳು ಸಾಗಿಸುವ 600 ಲಾರಿಗಳಿಗೆ ಜಿಪಿಎಸ್‌, ಮರಳು ಧಕ್ಕೆಗೆ ಜಿಪಿಎಸ್‌ ಸಹಿತ ಜಿಯೋ ಫೆನ್ಸಿಂಗ್‌ ಅಳವಡಿಸಲಾಗಿದೆ. 10 ಟನ್‌ ಮರಳಿಗೆ 5,500 ರೂ. ದರ ನಿಗದಿಪಡಿಸಿದ್ದು, ಪ್ರತಿ ಟನ್‌ ಮರಳು ಸಾಗಾಟಕ್ಕೆ 96 ರೂ. ರಾಜಧನ ಪಾವತಿಸಬೇಕು. 20 ಕಿ.ಮೀ. ವ್ಯಾಪ್ತಿಯೊಳಗೆ ಸಣ್ಣ ವಾಹನದ ಮೂಲಕ ಮರಳು ಸಾಗಾಟಕ್ಕೆ 1,500 ರೂ., ಬಳಿಕದ ಪ್ರತಿ ಕಿ.ಮೀ.ಗೆ 35 ರೂ. ಸಾಗಣೆ ವೆಚ್ಚ ನಿಗದಿಯಾಗಿದೆ. 20 ಕಿ. ಮೀ. ಒಳಗೆ ದೊಡ್ಡ ವಾಹನದಲ್ಲಿ ಮರಳು ಸಾಗಿಸಲು 2,500 ರೂ. ಮತ್ತು ಹೆಚ್ಚುವರಿ ಪ್ರತಿ ಕಿ.ಮೀ.ಗೆ 50 ರೂ.ನಂತೆ ದರ ವಸೂಲಿ ಮಾಡಲಾಗುತ್ತಿದೆ.

 

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

23 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

34 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

39 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

46 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago