Featured

ಉಡುಪಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಂ ಆರಂಭ: ಡಾ.ಬೇಳೂರು ರಾಘವೇಂದ್ರ ಶೆಟ್ಟಿ -Vishwanews24

ಉಡುಪಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಂ ಆರಂಭ: ಡಾ.ಬೇಳೂರು ರಾಘವೇಂದ್ರ ಶೆಟ್ಟಿ -Vishwanews24

ಉಡುಪಿ: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಐದು ಕೋಟಿ ರೂ. ವೆಚ್ಚದಲ್ಲಿ ಉಡುಪಿಯಲ್ಲಿ ಕರಕುಶಲ ವಸ್ತುಗಳ ಶೂರೂಮ ಹಾಗೂ ಕುಂದಾಪುರದಲ್ಲಿ ಉತ್ಪಾದನಾ ಘಟಕ ನಿರ್ಮಾಣ ಕಾರ್ಯವು ಮೂರು ತಿಂಗಳಲ್ಲಿ ಆರಂಭಗೊಳ್ಳಲಿದೆ ಎಂದು ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ ಆರು ದಿನಗಳ ಕರಕುಶಲ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಅದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ಭಾಗದ ಕರಕುಶಲ ಕರ್ಮಿಗಳಿಗೆ ಉತ್ತಮವಾದ ಕಟ್ಟಡ ನಿರ್ಮಾಣ ಮಾಡಿ, ಅವರಿಗೆ ಅಗತ್ಯವಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಸ್ಥಳೀಯವಾಗಿ ಉತ್ಪಾದನೆಯಾಗುವ ವಸ್ತುಗಳಿಗೆ ಹೆಚ್ಚಿನ ಒತ್ತು ನೀಡುವ ಕಾರ್ಯ ಮಾಡಲಾಗುವುದು. ಸ್ವಾವಲಂಬಿ ಬದುಕು ನಡೆಸುತ್ತಿರುವ ಕರಕುಶಲ ಕರ್ಮಿಗಳು, ಉತ್ಪಾದಿಸುವ ವಸ್ತುಗಳನ್ನ್ನು ಖರೀದಿಸುವ ಮೂಲಕ ಅವರಿಗೆ ಹೆಚ್ಚಿನ ಬೆಂಬಲ ನೀಡಬೇಕು. ವಿದೇಶಿ ವಸ್ತುಗಳಿಗೆ ಪ್ರೋತ್ಸಾಹ ನೀಡುವ ಬದಲು, ದೇಶೀಯ ವಸ್ತುಗಳನ್ನ ಖರೀದಿ ಮಾಡಬೇಕಾದ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನ : ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ : ಪ್ರಧಾನಿ ಮೋದಿ-Vishwanews24

ಕರಕುಶಲ ವಸ್ತುಗಳನ್ನು ತಯಾರಿಸಲು ಕುಶಲಕರ್ಮಿಗಳಿಗೆ, ಸಬ್ಸಿಡಿ ದರದಲ್ಲಿ ಗಂಧದ ಪರಿಕರ ನೀಡಲಾಗುವುದು. ಇಡೀ ರಾಜ್ಯದಲ್ಲಿ ಹೊಸದಾಗಿ 12 ಶೋ ರೂಮ್ ಗಳನ್ನು ಸ್ಥಾಪಿಸುವ ಉದ್ಧೇಶವಿದ್ದು, ಕರ್ನಾಟಕ ಪರಂಪರೆ ಸೂಚಿಸುವ, ಹಂಪಿ, ಮೈಸೂರು ಅರಮನೆ ಬೇಲೂರು ಹಳೇಬೀಡು ಮಾದರಿಯ ವಸ್ತು ಗಳನ್ನು ತಯಾರಿಸುವಂತೆ ಕರಕುಶಲ ಕರ್ಮಿಗಳಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಮೇಳದಲ್ಲಿ ಪರ್ಯಾಯ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಸೋದೆ ವಾದಿರಾಜ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಈ ವೇಳೆ ಗುಡಿಕೈಗಾರಿಕೆಯ ಮಡಿಕೆ ಹಾಗೂ ಬಿದಿರಿನ ಕರಕುಶಲ ವಸ್ತುಗಳ ಪ್ರದರ್ಶನ ನಡೆಸಲಾಯಿತು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

16 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

16 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

16 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

17 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

18 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

18 hours ago