Featured

ಉಡುಪಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಂ ಆರಂಭ: ಡಾ.ಬೇಳೂರು ರಾಘವೇಂದ್ರ ಶೆಟ್ಟಿ -Vishwanews24

ಉಡುಪಿಯಲ್ಲಿ 5 ಕೋಟಿ ವೆಚ್ಚದಲ್ಲಿ ಕರಕುಶಲ ವಸ್ತುಗಳ ಶೋರೂಂ ಆರಂಭ: ಡಾ.ಬೇಳೂರು ರಾಘವೇಂದ್ರ ಶೆಟ್ಟಿ -Vishwanews24

ಉಡುಪಿ: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಐದು ಕೋಟಿ ರೂ. ವೆಚ್ಚದಲ್ಲಿ ಉಡುಪಿಯಲ್ಲಿ ಕರಕುಶಲ ವಸ್ತುಗಳ ಶೂರೂಮ ಹಾಗೂ ಕುಂದಾಪುರದಲ್ಲಿ ಉತ್ಪಾದನಾ ಘಟಕ ನಿರ್ಮಾಣ ಕಾರ್ಯವು ಮೂರು ತಿಂಗಳಲ್ಲಿ ಆರಂಭಗೊಳ್ಳಲಿದೆ ಎಂದು ನಿಗಮದ ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ ಆರು ದಿನಗಳ ಕರಕುಶಲ ಮೇಳದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಅದಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ. ಈ ಭಾಗದ ಕರಕುಶಲ ಕರ್ಮಿಗಳಿಗೆ ಉತ್ತಮವಾದ ಕಟ್ಟಡ ನಿರ್ಮಾಣ ಮಾಡಿ, ಅವರಿಗೆ ಅಗತ್ಯವಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಸ್ಥಳೀಯವಾಗಿ ಉತ್ಪಾದನೆಯಾಗುವ ವಸ್ತುಗಳಿಗೆ ಹೆಚ್ಚಿನ ಒತ್ತು ನೀಡುವ ಕಾರ್ಯ ಮಾಡಲಾಗುವುದು. ಸ್ವಾವಲಂಬಿ ಬದುಕು ನಡೆಸುತ್ತಿರುವ ಕರಕುಶಲ ಕರ್ಮಿಗಳು, ಉತ್ಪಾದಿಸುವ ವಸ್ತುಗಳನ್ನ್ನು ಖರೀದಿಸುವ ಮೂಲಕ ಅವರಿಗೆ ಹೆಚ್ಚಿನ ಬೆಂಬಲ ನೀಡಬೇಕು. ವಿದೇಶಿ ವಸ್ತುಗಳಿಗೆ ಪ್ರೋತ್ಸಾಹ ನೀಡುವ ಬದಲು, ದೇಶೀಯ ವಸ್ತುಗಳನ್ನ ಖರೀದಿ ಮಾಡಬೇಕಾದ ಅವಶ್ಯಕತೆ ಇದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ 125ನೇ ಜನ್ಮದಿನ : ದೇಶದ ಸ್ವಾತಂತ್ರ್ಯಕ್ಕಾಗಿ ಅವರು ಮಾಡಿದ ತ್ಯಾಗ ಮತ್ತು ಸಮರ್ಪಣೆಯನ್ನು ಸದಾ ಸ್ಮರಿಸುತ್ತೇವೆ : ಪ್ರಧಾನಿ ಮೋದಿ-Vishwanews24

ಕರಕುಶಲ ವಸ್ತುಗಳನ್ನು ತಯಾರಿಸಲು ಕುಶಲಕರ್ಮಿಗಳಿಗೆ, ಸಬ್ಸಿಡಿ ದರದಲ್ಲಿ ಗಂಧದ ಪರಿಕರ ನೀಡಲಾಗುವುದು. ಇಡೀ ರಾಜ್ಯದಲ್ಲಿ ಹೊಸದಾಗಿ 12 ಶೋ ರೂಮ್ ಗಳನ್ನು ಸ್ಥಾಪಿಸುವ ಉದ್ಧೇಶವಿದ್ದು, ಕರ್ನಾಟಕ ಪರಂಪರೆ ಸೂಚಿಸುವ, ಹಂಪಿ, ಮೈಸೂರು ಅರಮನೆ ಬೇಲೂರು ಹಳೇಬೀಡು ಮಾದರಿಯ ವಸ್ತು ಗಳನ್ನು ತಯಾರಿಸುವಂತೆ ಕರಕುಶಲ ಕರ್ಮಿಗಳಿಗೆ ಮನವಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.

ಮೇಳದಲ್ಲಿ ಪರ್ಯಾಯ ಅದಮಾರು ಮಠಾಧೀಶ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಸೋದೆ ವಾದಿರಾಜ ಮಠಾಧೀಶ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಈ ವೇಳೆ ಗುಡಿಕೈಗಾರಿಕೆಯ ಮಡಿಕೆ ಹಾಗೂ ಬಿದಿರಿನ ಕರಕುಶಲ ವಸ್ತುಗಳ ಪ್ರದರ್ಶನ ನಡೆಸಲಾಯಿತು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

15 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

16 hours ago