Featured

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ

ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ ಸಲ್ದಾನಾ ಅವರು ವಾಣಿಜ್ಯ ಪೈಲಟ್ ಪರವಾನಗಿ ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ಮಹಿಳಾ ವಾಣಿಜ್ಯ ಪೈಲಟ್ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ.

ಅಸ್ಮಾ ಸಲ್ದಾನಾ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಕಮರ್ಷಿಯಲ್ ಪೈಲಟ್ ಲೈಸೆನ್ಸ್ (ಸಿಪಿಎಲ್) ಪಡೆದುಕೊಂಡಿದ್ದಾರೆ. ಈಕೆ ಕೌಡೂರು ರಂಗನಪಲೆಯ ನಿವಾಸಿ ಅಶೋಕ್ ಜಾಕೋಬ್ ಸಲ್ದಾನಾ ಮತ್ತು ಮರಿಯಾ ಗ್ರೆಟ್ನಾ ಸಲ್ದಾನಾ ದಂಪತಿಯ ಪುತ್ರಿ.

ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಶಿಕ್ಷಣವನ್ನು ಶೈನಿ ಅವರು ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪೂರ್ಣಗೊಳಿಸಿದ್ದರು. ಬಾಲ್ಯದಿಂದಲೂ ವಿಮಾನಯಾನ ಕ್ಷೇತ್ರದಲ್ಲಿ ವಿಶೇಷ ಆಸಕ್ತಿ ಹೊಂದಿದ್ದ ಶೈನಿ ತನ್ನ ಗುರಿಯನ್ನು ತಲುಪಲು ಕಠಿನ ಹಾದಿ ಆಯ್ಕೆ ಮಾಡಿಕೊಂಡು ಯಶಸ್ಸು ಕಂಡಿದ್ದಾರೆ.

ಪೈಲಟ್ ಕನಸು ನನಸು ಮಾಡಿಕೊಳ್ಳಲು ಶೈನಿ ಬೆಂಗಳೂರಿನಲ್ಲಿ ನಡೆದ ಪ್ರತಿಷ್ಠಿತ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ ಪ್ರವೇಶ ಪರೀಕ್ಷೆಯನ್ನು ಬರೆದು ಯಶಸ್ವಿಯಾಗಿ ಉತ್ತೀರ್ಣರಾಗಿದ್ದರು. ನಂತರ 2023ರ ಆಗಸ್ಟ್ ನಿಂದ ಉತ್ತರಪ್ರದೇಶದ ಫುರ್ಸತ್ ಗಂಜ್ ನಲ್ಲಿರುವ ಪ್ರತಿಷ್ಠಿತ ಇಂದಿರಾಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಕಠಿನ ವೃತ್ತಿಪರ ಪೈಲಟ್ ತರಬೇತಿ ಪಡೆದಿದ್ದರು.

Vishwa News 24

Recent Posts

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

18 minutes ago

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ – vishwanews24

ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…

2 hours ago

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗ ಯಾತ್ರೆ – vishwanews24

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್‌ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…

2 hours ago

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ – vishwanews24

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…

3 hours ago

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

3 hours ago

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

3 hours ago