Featured

ಉಡುಪಿಯ ಸಂತೆಕಟ್ಟೆ ಜಂಕ್ಷನ್ : ಸ್ಕೂಟರ್​ ಮತ್ತು ಕೇರಳ ಬಸ್​ ನಡುವೆ ಭೀಕರ ಅಪಘಾತ: ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು – VIshwanews24

ಉಡುಪಿಯ ಸಂತೆಕಟ್ಟೆ ಜಂಕ್ಷನ್ : ಸ್ಕೂಟರ್​ ಮತ್ತು ಕೇರಳ ಬಸ್​ ನಡುವೆ ಭೀಕರ ಅಪಘಾತ: ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು – VIshwanews24

ಉಡುಪಿ: ಸ್ಕೂಟರ್​ ಮತ್ತು ಕೇರಳ ಕೆಎಸ್​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು ಮೃತಪಟ್ಟ ಘಟನೆ ಸಂತೆಕಟ್ಟೆ ಜಂಕ್ಷನ್​ನಲ್ಲಿ ಸಂಭವಿಸಿದೆ.

ಗರಡಿಮಜಲು ನಿವಾಸಿ ಕರಾವಳಿ ಕಾವಲು ಪಡೆಯ ಎಎಸ್​ಐ ಗಣೇಶ್​ ಪೈ (58) ಹಾಗೂ ಇವರ ಹಿರಿಯ ಮಗಳು ಗಾಯತ್ರಿ (27) ಮೃತರು.

ಗಾಯತ್ರಿಗೆ ಮೂರು ವರ್ಷದ ಹಿಂದೆ ವಿವಾಹವಾಗಿದ್ದು, ಗಂಡ ಬ್ಯಾಂಕ್​ ಉದ್ಯೋಗಿಯಾಗಿದ್ದಾರೆ. ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದ ಅವರು ತವರು ಮನೆಯಲ್ಲಿ ಮಾ.4ರಂದು ನಿಗದಿಯಾಗಿದ್ದ ಸಮಾರಂಭಕ್ಕೆ 2 ದಿನ ಮುಂಚಿತವಾಗಿ ಆಗಮಿಸುತ್ತಿದ್ದರು.

ಬುಧವಾರ ಬೆಳಗ್ಗೆ 5.30ಕ್ಕೆ ಗದಗದಿಂದ ಆಗಮಿಸಿದ್ದ ತಮ್ಮ ಮಗಳನ್ನು ಬಸ್​ ತಂಗುದಾಣದಿಂದ ಮನೆಗೆ ಕರೆದುಕೊಂಡು ಸ್ಕೂಟರ್​ನಲ್ಲಿ ತಂದೆ ಹೋಗುತ್ತಿದ್ದರು. ಈ ವೇಳೆ ಕೇರಳದಿಂದ ಕೊಲ್ಲೂರಿಗೆ ಹೋಗುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಸ್ಕೂಟರ್​ಗೆ ಡಿಕ್ಕಿ ಹೊಡಿದ್ದಿದ್ದು, ತಂದೆ-ಮಗಳು ದುರ್ಮರಣ ಹೊಂದಿದ್ದಾರೆ.

ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ತೀರಾ ಎಡಬದಿಗೆ ಚಲಿಸಿದ ಬಸ್​ ಗಣೇಶ್​ ಪೈ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತಂದೆ ಮತ್ತು ಮಗಳು ರಸ್ತೆ ಮೇಲೆ ಬಿದ್ದು, ಇಬ್ಬರ ತಲೆಗೂ ಗಂಭೀರ ಗಾಯವಾಗಿತ್ತು. ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್​ ಪೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 minutes ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

27 minutes ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

44 minutes ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

58 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

2 hours ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

2 hours ago