ಉಡುಪಿ: ರಾಜ್ಯ ಸರಕಾರ ಬಿಜೆಪಿಯ ನಾಯಕ ಸಿ.ಟಿ.ರವಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ವಿಧಾನ ಸೌಧದಲ್ಲಿ ಶಾಸಕರನ್ನು ಯಾವುದೇ ಆದೇಶ , ಸಾಕ್ಷ್ಯಧಾರಗಳಿಲ್ಲದೇ ಬಂದಿಸಿದ ಘಟನೆ ದೇಶದ 70 ವರ್ಷಗಳ ಸ್ವಾತಂತ್ರ್ಯ ಇತಿಹಾಸದಲ್ಲಿ ಪ್ರಪ್ರಥಮ ಬಾರಿ ರಾಜ್ಯದಲ್ಲಿ ಗಣಿಸಿದೆ. ಇದು ರಾಜ್ಯ ಸರಕಾರದ ಬರ್ಬರ ಕೃತ್ಯವಾಗಿದೆ ಎಂದು ಟೀಕಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಸಾಂವಿಧಾನಿಕ ಬಿಕ್ಕಟ್ಟು ತಲೆದೋರಿದೆ, ಆದ್ದರಿಂದ ರಾಜ್ಯಪಾಲರು ಮಧ್ಯ ಪ್ರವೇಶಿಸಿ, ರಾಜ್ಯ
ಸರಕಾರವನ್ನು ಬರ್ಕಾಸ್ತುಗೊಳಿಸಬೇಕು. ರಾಜ್ಯ ಸರಕಾರದ ವಕ್ಸ್ ಮೂಡಾ, ವಾಲ್ಮೀಕಿ ನಿಗಮದ ಹಗರಣಗಳನ್ನು ಬಿಜೆಪಿ ಅದರಲ್ಲೂ ವಿಶೇಷವಾಗಿ ಸಿ.ಟಿ.ರವಿ ಹೊರ ಹಾಕುತ್ತಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಸರ್ಕಾರ ಅವರ ಮೇಲೆ ಸೇಡು ತೀರಿಸಿಕೊಂಡಿದೆ ಎಂದು ಅವರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನಾಯಕರಾದ ಕಿರಣ್ ಕುಮಾರ್ ಬೈಲೂರು, ಶ್ರೀನಿಧಿ ಹೆಗ್ಡೆ, ಕರಾಂಕ್ ಶಿವಕ್ತಾಯ, ಶ್ಯಾಮಲಾ ಕುಂದರ್, ಶಿಲ್ಪಾ ಸುವರ್ಣ, ಶ್ರೀಕಾಂತ್ ನಾಯಕ್, ಶ್ರೀಕಾಂತ್ ಕಾಮತ್, ಶಿವಕುಮಾರ್, ವಿಜಯಕುಮಾರ್ ಕೊಡವೂರು, ರಾಜೇಶ್ ಕಾವೇರಿ, ಪ್ರಭಾಕರ ಪೂಜಾರಿ, ಪೃಥ್ವಿರಾಜ್ ಶೆಟ್ಟಿ, ಉಮೇಶ್ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…