Featured

ಉಡುಪಿ : ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆ ಪಡೆಯಲು ಅನುಕೂಲ : ದಿನಕರ ಬಾಬು -Vishwanews24

ಉಡುಪಿ:ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆ ಪಡೆಯಲು ಅನುಕೂಲ : ದಿನಕರ ಬಾಬು -Vishwanews24

ಬ್ಲೂ ಫ್ಲಾಗ್ ಯೋಜನೆಯಿಂದ ಸ್ಥಳೀಯರಿಗೆ ಮತ್ತು ಮೀನುಗಾರರಿಗೆ ತೊಂದರೆಯಾಗದಂತೆ  ಅಗತ್ಯ ಕ್ರಮ ಕೈಗೊಳ್ಳಿ : ಶಶಿಕಾಂತ್ ಪಡುಬಿದ್ರೆ ..

ಉಡುಪಿ,: “ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಹುತೇಕ ಹೊರರಾಜ್ಯದ ಸಿಬ್ಬಂದಿಗಳೇ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯರಿಗೆ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಿಂದ, ಬ್ಯಾಂಕ್‌ನ ಕೆಲಸ ಕಾರ್ಯಗಳಲ್ಲಿ ತೊಂದರೆಯಾಗುತ್ತಿದ್ದು, ಬ್ಯಾಂಕ್ ಸೇವೆಗಳಲ್ಲಿ ಸ್ಥಳೀಯರಿಗೆ ನೆರವಾಗುವಂತೆ ಕನಿಷ್ಠ ಪ್ರಮಾಣದಲ್ಲಿಯಾದರೂ ಕರ್ನಾಟಕ ರಾಜ್ಯದ ಸಿಬ್ಬಂದಿಯನ್ನು ನೇಮಿಸಬೇಕು” ಎಂದು ಜಿಲ್ಲಾ ಪಂಚಾಯತ್‌ನಲ್ಲಿ ಗುರುವಾರ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.

“ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕನಿಷ್ಠ 2 ಸಿಬ್ಬಂದಿಯಾದರೂ ಕನ್ನಡದವರು ಇದ್ದಲ್ಲಿ ಸ್ಥಳೀಯರಿಗೆ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಅನುಕೂಲವಾಗುತ್ತದೆ. ಇಲ್ಲವಾದಲ್ಲಿ ಅನ್ಯರಾಜ್ಯದ ಸಿಬ್ಬಂದಿಯೊಂದಿಗಿನ ಭಾಷಾ ಸಮಸ್ಯೆಯಿಂದ, ಬ್ಯಾಂಕ್‌ಗಳಲ್ಲಿ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಲಭ್ಯವಾಗುವುದಿಲ್ಲ” ಎಂದು ಸದಸ್ಯ ಬಾಬು ಶೆಟ್ಟಿ ತಿಳಿಸಿದರು.

ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು : ಎಸ್‌‌.ಟಿ ಸಮುದಾಯ ಒತ್ತಾಯ -Vishwanews24

“ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಆಂಧ್ರ ಪ್ರದೇಶ, ಬಿಹಾರ ಹಾಗೂ ಉತ್ತರ ಪ್ರದೇಶದ ಸಿಬ್ಬಂದಿ ಆಯ್ಕೆಯಾಗುತ್ತಿದ್ದಾರೆ” ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ರುದ್ರೇಶ್ ತಿಳಿಸಿದರು.

ಪಡುಬಿದ್ರೆ ಎಂಡ್ ಪಾಯಿಂಟ್‌ನಲ್ಲಿ ಬ್ಲೂ ಫ್ಲಾಗ್ ಯೋಜನೆಯಿಂದ ಸ್ಥಳೀಯರಿಗೆ ಮತ್ತು ಮೀನುಗಾರರಿಗೆ ದೈನಂದಿನ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪ್ರವಾಸೋದ್ಯಮ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಬೀಚ್‌ನಲ್ಲಿ ಅಗತ್ಯ ಮೂಲಸೌಲಭ್ಯ ಒದಗಿಸುವಂತೆ ಸದಸ್ಯ ಶಶಿಕಾಂತ್ ಪಡುಬಿದ್ರೆ ಕೋರಿದರು.

ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.

ಜನವರಿ 31 ರಂದು ಉಡುಪಿ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟನೆ -Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago