Featured

ಉಡುಪಿ:ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ; ರಾಜ್ಯ ಕಾರ್ಯಕಾರಿಣಿ ಸಭೆ – vishwanews24

ಉಡುಪಿ:ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ; ರಾಜ್ಯ ಕಾರ್ಯಕಾರಿಣಿ ಸಭೆ

ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಇದರ ರಾಜ್ಯ ಕಾರ್ಯಕಾರಿಣಿ ಸಭೆಯು ಆ.25 ರಂದು ಶ್ರೀಮಹಾಲಕ್ಷ್ಮಿ ದೇವಸ್ಥಾನ ಉಚ್ಚಿಲದಲ್ಲಿ ರಾಜ್ಯಾಧ್ಯಕ್ಷರಾದ ಡಾ.ಜಯರಾಮ್ ಅಧ್ಯಕ್ಷತೆಯಲ್ಲಿ ನಡೆಯಿತು. ರಾಷ್ಟ್ರೀಯ ಅಧ್ಯಕ್ಷರಾದ ಟಿ ಬಿ ಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿ ಸಾಸ್ ಉಡುಪಿ ಜಿಲ್ಲಾ ಗೌರವಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್ ಗೌರವ ಸಲಹೆಗಾರರ ಆನಂದ್ ಪಿ ಸುವರ್ಣ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ಸಾಸ್ ದಕ್ಷಿಣ ಪ್ರಾಂತಿಯ ಕಾರ್ಯದರ್ಶಿ ಕೃಷ್ಣಯ್ಯಜಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಎನ್ ಎಮ್ ಹೆಗ್ಡೆ ರಾಜ್ಯ ಉಪಾಧ್ಯಕ್ಷ ಸಂಪತ್ ಕುಮಾರ್ ಮಹಿಳಾ ಸಾಸ್ ಜಿಲ್ಲಾಧ್ಯಕ್ಷರಾದ ತಾರಾ ಯು ಆಚಾರ್ಯ ಸಾಸ್ ಕಾವು ತಾಲೂಕ್ ಅಧ್ಯಕ್ಷ ರಘುರಾಮ್ ಶೆಟ್ಟಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಗಣೇಶ್ ಪೊದುವಾಲ್ ಉಪಸ್ಥಿತರಿದ್ದರು.

 

ಸಾಸ್ ಸದಸ್ಯರು ಸೇವಾ ಮನೋಭಾವನೆಯಿಂದ ಬೇರೆ ಬೇರೆ ರಾಜ್ಯದಿಂದ ಬರುವ ಮಾಲಾದಾರಿಗಳಿಗೆ ತಮ್ಮ ತಮ್ಮ ಜಿಲ್ಲೆಗಳಲ್ಲಿ ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸ್ಪಂದಿಸುವ ಕೆಲಸ ಮಾಡಬೇಕು. ಸ್ವಚ್ಛ ಶಬರಿಮಲೆ ಕರೆ ನೀಡಿದ ಸಂದರ್ಭದಲ್ಲಿ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಗುರುಸ್ವಾಮಿಗಳು ಮತ್ತು ಮಾಲಾಧಾರಿಗಳು ಹಿಂದಿನಿಂದಲೂ ನಡೆದುಕೊಂಡು ಬಂದ ವೃತ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾಗ ಬೇಕು ಇರುಮುಡಿಯಲ್ಲಿ ಪ್ಲಾಸ್ಟಿಕ್ ಬಳಸದಂತೆ ಹಾಗೂ ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಸಂಘಟನೆಯಲ್ಲಿ ಸೇರಿಕೊಳ್ಳುವ ಮೂಲಕ ಅಯ್ಯಪ್ಪ ಧರ್ಮ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳ ಬೇಕೆಂದು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ಮತ್ತು ಉಡುಪಿ ಜಿಲ್ಲೆಯಿಂದ ಎಲ್ಲಾ ತಾಲೂಕಿನಿಂದ ಪದಾಧಿಕಾರಿಗಳು ಮತ್ತು ಮಹಿಳಾ ಸಾಸ್ ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ಉಪಾಧ್ಯಕ್ಷರಾದ ವಿಜಯ ಕೊಡವೂರು ಪ್ರಾಸ್ತಾವಿಕ ಮಾತಾಡಿದರು ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ ವಂದಿಸಿದರು.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago