ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಪೊಲೀಸರು ಸುಮೊಟೊ ಕೇಸು ದಾಖಲಿಸಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ ಜಿಲ್ಲೆ.
ಮಹಿಳೆಯರಿಗೆ ಗೌರವ ಕೊಡುವ ಜಿಲ್ಲೆ. ಮೂವರು ಹುಡುಗಿಯರ ವರ್ತನೆಯಿಂದ ಜಿಲ್ಲೆ ತಲೆತಗ್ಗಿಸುವಂತಾಗಿದೆ.
ಇದರ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇರಿಸಿದ ಕ್ರಮ ಸರಿಯಲ್ಲ. ಇದು ಬ್ಲಾಕ್ ಮೇಲ್ ತಂತ್ರ. ಈ ಕುರಿತು ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಗಮನಕ್ಕೆ ತರುತ್ತೇನೆ.
ಉಡುಪಿ ಜಿಲ್ಲೆಯ ಪೊಲೀಸ್ ಇಲಾಖೆ ಮೇಲೆ ವಿಶ್ವಾಸ ಇದೆ. ವಿಳಂಬ ಮಾಡಿದರೆ ನ್ಯಾಯಕ್ಕಾಗಿ ಹೋರಾಡುತ್ತೇವೆ.
ವಿಡಿಯೋ ಕ್ಲಿಪಿಂಗ್ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಸೂಕ್ತ ಕ್ರಮ ಜರುಗಿಸ ಬೇಕು ಎನ್ನುವುದು ನಮ್ಮ ಬೇಡಿಕೆ ಎಂದರು.
ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದ ರಶ್ಮಿ ಸಾಮಂತ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಪೊಲೀಸರು ಆಕೆಯ ಮನೆಗೆ ಹೋಗಿ ವಿಚಾರಣೆ ಮಾಡಿದ್ದಾರೆ.
ರಶ್ಮಿ ಸಾಮಂತ್ ಮನೆಯವರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…