ಉಡುಪಿ

ಉಡುಪಿ:ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ನಿರ್ಗತಿಕರಿಗೆ ಕಂಬಳಿ ವಿತರಣೆ ಮಾಡುವುದರ ಮೂಲಕ ಸ್ವಾತಂತ್ರ್ಯ ದಿನ ಆಚರಿಸಿದ ವಿಶ್ವಾಸ್ ಅಮೀನ್-Vishwanews24

ಉಡುಪಿ: ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ನಿರ್ಗತಿಕರಿಗೆ ಚಳಿಯಿಂದ ರಕ್ಷಣೆ ಪಡೆಯಲು ಕಂಬಳಿ ವಿತರಣೆ ಮಾಡುವುದರ ಮೂಲಕ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಅವರು 74 ನೇ ಸ್ವಾತಂತ್ರ್ಯ ದಿನವನ್ನು ವಿಶಿಷ್ಟವಾಗಿ ಆಚರಿಸಿದರು.

ಉಡುಪಿಯಲ್ಲಿ ಕಳೆದ ಕೆಲವಾರು ದಿನಗಳಿಂದ ಎಡೆಬಿಡದೇ ನಿರಂತರವಾಗಿ ಸುರಿಯುತ್ತಿರುವ ಮಳೆಯು ನಿರ್ಗತಿಕರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡಿದೆ. ತಮ್ಮವರು ಎಂದು ಹೇಳಿಕೊಳ್ಳಲು ಯಾರೂ ಇಲ್ಲದೆ, ಉಳಿದುಕೊಳ್ಳಲು ಸ್ವಂತಕ್ಕೊಂದು ಮನೆಯಿಲ್ಲದೇ ದಿನವಿಡಿ ಬಿಕ್ಷೆ ಬೇಡುತ್ತಾ ನಗರವಿಡೀ ಅಲೆದಾಡಿ ಸಂಜೆಯಾಗುತ್ತಲೆ ಉಡುಪಿ ನಗರದ ಅಂಗಡಿ ಮುಂಗಟ್ಟುಗಳ, ಬಸ್ಟ್ಯಾಂಡ್ ಬದಿಯನ್ನೇ ಉಳಿದುಕೊಳ್ಳುವ ತಾಣವಾಗಿ ಆಶ್ರಯಿಸಿರುವ ಅನೇಕ ಅನಾಥರು ಈ ಸುರಿಯುವ ಮಳೆಯಿಂದ ಚಳಿಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು ಹೆಣಗಾಡುತ್ತಿದ್ದು ಅಂತಹವರ ದಯನೀಯ ಪರಿಸ್ಥಿತಿಯನ್ನು ಕಂಡು ಮನಕರಗಿದ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್.ವಿ.ಅಮೀನ್ ಸ್ವಾತಂತ್ರ್ಯ ದಿನದಂದು ಉಡುಪಿ ನಗರದಲ್ಲಿ ಆಶ್ರಯ ಪಡೆದಿರುವ ಈ ಎಲ್ಲಾ ಅನಾಥರಿಗೂ ಚಳಿಯಿಂದ ರಕ್ಷಣೆ ಪಡೆಯಲು ಹೊದಿಕೆಗಳನ್ನು ನೀಡಿದರು.

ಈ ವೇಳೆ ಮಾತನಾಡಿದ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರು ಕಂಡ ರಾಮ ರಾಜ್ಯದ ಕನಸು ಕನಸಾಗಿಯೆ ಉಳಿದಿದೆ. ಭಾರತದ ಪ್ರತಿಯೊಬ್ಬ ಪ್ರಜೆಯೂ ಉಳಿದುಕೊಳ್ಳಲು ಸೂರು, ಉಣ್ಣಲು ಅನ್ನ, ಉಟ್ಟುಕೊಳ್ಳಲು ಬಟ್ಟೆ ಈ ಮೂರು ಮೂಲಭೂತ ಆದ್ಯತೆಯಿಂದ ವಂಚಿತರಾಗಬಾರದು ಎನ್ನುವ ಸಂವಿಧಾನದ ಆಶಯವಿದ್ದರೂ ಅನೇಕ ನಿರ್ಗತಿಕರು ಇನ್ನೂ ಅನಾಥವಾಗಿಯೆ ನಮ್ಮ ನಡುವೆ ಇದ್ದಾರೆ, ಇಂತವರಿಗೆ ನಮ್ಮ ಕೈಲಾಗುವ ಸೇವೆಯನ್ನು ಮಾಡಬೇಕು ಎನ್ನುವ ಉದ್ದೇಶದಿಂದ ಇದನ್ನು ಮಾಡಲಾಗಿದೆ ಎಂದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago